ಹಾಸನ :ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಲು ವಿನೂತನ ಹಾಗು ಅಪಾಯಕಾರಿ ರೀಲ್ಸ್Reels ಮಾಡುವ ಹುಚ್ಚಿನಲ್ಲಿ ಬಿದ್ದಿರುವ ಕೆಲ ಯುವಕರು ಹುಚ್ಚಾಟದಿಂದ ತಮ್ಮ ಜೀವ ಕಳೆದುಕೊಳ್ಳುತ್ತಿದ್ದಾರೆ.
ಇಂತಹುದೆ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು ರೀಲ್ಸ್ ಮಾಡಲು ಹೋಗಿ ಬೆಟ್ಟದ ಪ್ರಪಾತಕ್ಕೆ ಬಿದ್ದು ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಗವಿಬೆಟ್ಟದಲ್ಲಿ ನಡೆದಿದೆ.ರಾಕಿದ್ (18) ಯುವಕ ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದ್ದು, ಶನಿವಾರಸಂತೆಯಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸಕಲೇಶಪುರದ ಗವಿಬೆಟ್ಟಕ್ಕೆ ಬಂದಿದ್ದ ರಾಕಿದ್, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಜಾರಿ ಬಿದ್ದಿರುತ್ತಾನೆ. ಪರಿಣಾಮ ಆತನ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ಮತ್ತು ಯಸಳೂರು ಠಾಣೆ ಪೊಲೀಸರ ಸಹಾಯದಿಂದ ರಾಕಿದ್ ನನ್ನು ಮೇಲೆತ್ತಿ ತಕ್ಷಣವೇ ಶನಿವಾರಸಂತೆ ಅಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹಾಸನದ ಹಿಮ್ಸ್ಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.ಯಸಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Breaking News
- ರಾಯಲ್ಪಾಡು ಬಳಿ ಬಸ್ಸುಗಳ ನಡುವೆ ಡಿಕ್ಕಿ ಪ್ರಯಾಣಿಕ ಸಾವು!
- ಮಾಲೂರಿನ ಬೈರನದೊಡ್ಡಿ ನಗರೇಶ್ವರ ದೇವಾಲಯ ಲೋಕಾರ್ಪಾಣೆ
- ಚಿಂತಾಮಣಿ-ಮದನಪಲ್ಲಿ ರಸ್ತೆ ಖಾಸಗಿ ಬಸ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನ!
- ಅವಿಭಜಿತ ಕೋಲಾರ ಜಿಲ್ಲೆಯ ರೈತರಿಗೆ ನಿರಾಶದಾಯಕ ಬಜೆಟ್ ಎಲ್ಲೆಡೆ ಟೀಕೆ!
- ಮಾವುಬೆಳೆಗಾರರಿಗೆ ಏನೂ ಘೊಷಿಸದ ಸಿದ್ದರಾಮಯ್ಯ sweet 16 ಬಡ್ಜೆಟ್.
- ಶ್ರೀನಿವಾಸಪುರ ಜನರಿಂದ ಸಿದ್ದರಾಮಯ್ಯ ಬಜೆಟ್ ಮೇಲೆ ಭಾರೀ ನೀರಿಕ್ಷೆ!
- ಜೆಡಿಎಸ್ CMR ಶ್ರೀನಾಥ್ ಮನೆಗೆ ಪೇಜಾವರ ಸ್ವಾಮಿಜಿ ಭೇಟಿ!
- ಬುಲೆಟ್ ಬೈಕುಹತ್ತಿ ಪೋಲಿರೈಡ್ ಮಾಡಿದ್ದ LOVER ಬಂಧನ!
- ಕಾಂಗ್ರೆಸ್ ಮಂತ್ರಿ ವಿರುದ್ದ ಅರಣ್ಯ ಭೂಮಿ ಒತ್ತುವರಿ ಆರೋಪ
- ಶ್ರೀನಿವಾಸಪುರ:ವಿಧವೆ ಮನೆಶೆಡ್ ಕಾಂಪೌಂಡ್ ದೌರ್ಜನ್ಯದಿಂದ ಧ್ವಂಸ ಆರೋಪ
Wednesday, March 12