ಶ್ರೀನಿವಾಸಪುರ: ಪ್ರೌಡಶಾಲಾ ವಿಧ್ಯಾರ್ಥಿಯ ಬೈಕ್ ವೀಲಿಂಗ್ ಹುಚ್ವಾಟಕ್ಕೆ ಏಳು ಮಂದಿ ವಿಧ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ KSRTC ಬಸ್ ಡಿಪೋ ಬಳಿ ಶ್ರೀನಿವಾಸಪುರದ ಪ್ರತಿಷ್ಟಿತ ವೇಣು ಶಾಲೆಯಲ್ಲಿ ಓದುತ್ತಿರುವ ಪ್ರೌಡಶಾಲಾ ವಿಧ್ಯಾರ್ಥಿ ಸೂರ್ಯ ತಾನು ತಂದಿದ್ದ ಪಲ್ಸರ್ ಬೈಕ್ ನಲ್ಲಿ ತನ್ನ ಇಬ್ಬರು ಸ್ನೇಹಿತರನ್ನು ಕೂರಿಸಿಕೊಂಡು ನಡು ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುತ್ತ ಸ್ಟಂಟ್ ಮಾಡಿಕೊಂಡು ಬೈಕ್ ಚಲಾಯಿಸಿಕೊಂಡು ಹೋಗಿರುತ್ತಾನೆ ಈ ಸಂದರ್ಭದಲ್ಲಿ ಆಯಾತಪ್ಪಿದ ಬೈಕ್ ರಸ್ತೆಯಲ್ಲಿ ಹೋಗುತ್ತಿದ್ದ ವಿಧ್ಯಾರ್ಥಿಗಳ ಮೇಲೆ ಹರಿದಿದೆ ಘಟನೆಯಿಂದ ಏಳು ವಿಧ್ಯಾರ್ಥಿನಿಯರು ಮತ್ತು ಬೈಕ್ ಸವಾರ ಸೂರ್ಯ ಹಾಗು ಹಿಂಬದಿ ಕುಳಿತಿದ್ದ ಇಬ್ಬರು ವಿಧ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಲಿಖಿತ ಎನ್ನುವ ವಿಧ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತಡರಾತ್ರಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿರುವುದಾಗಿ ಹೇಳಲಾಗಿದೆ.
ಘಟನ ಸ್ಥಳಕ್ಕೆ ಶ್ರೀನಿವಾಸಪುರ ಇನ್ಸ್ಪೇಕ್ಟರ್ ರವಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದು ಬೈಕ್ ಅನ್ನು ವಶಕ್ಕೆ ಪಡೆದಿರುತ್ತಾರೆ. ಈ ಸಂಬಂಧ ವಿಧ್ಯಾರ್ಥಿ ಸೂರ್ಯ ಪೋಷಕರ ವಿರುದ್ದ ದೂರುದಾಖಲಿಸುವುದಾಗಿ ಹೇಳಿರುತ್ತಾರೆ.
Breaking News
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
Wednesday, April 16