ಶ್ರೀನಿವಾಸಪುರ:ಕಲ್ಲೂರಿನ ಗ್ರಾಮದೇವತೆ ಚೌಡೇಶ್ವರಿದೇವಿ ದರ್ಶನ ಪಡೆದು ಪುನೀತನಾದೆ ಅಮ್ಮನ ದರ್ಶನದಿಂದ ನೆಮ್ಮದಿ ಸಿಕ್ಕಿದಂತಾಗಿದೆ ಇದು ನನ್ನ ಪುಣ್ಯ ಎಂದು ತೋಟಗಾರಿಕೆ ಹಾಗು ಕೋಲಾರ ಜಿಲ್ಲೆ ಉಸ್ತವಾರಿ ಸಚಿವ ಮುನಿರತ್ನ ಹೇಳಿದರು ಅವರು ತಾಲೂಕಿನ ಕಸಬಾ ಹೋಬಳಿ ಕಲ್ಲೂರು ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿ ನವೀಕರಣವಾಗುತ್ತಿರುವ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಬೇಕಾದ ರಸ್ತೆ, ಹೈಮಾಸ್ಕ್ ಲೈಟ್ ಸೇರಿದಂತೆ ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಖ್ಯಾತರಾಗಿರುವ ಎಂಡೋಕ್ರೈನಾಲಜಿ ತಜ್ಞ ವೈದ್ಯ ಕಲ್ಲೂರು ಮೂಲದ ಡಾ.ಸೋಮಶೇಖರರೆಡ್ಡಿ ನಮ್ಮ ಕುಟುಂಬಕ್ಕೆ ಆಪ್ತರು ಅವರು ನೀಡಿದ ಆಹ್ವಾನದ ಮೇರೆಗೆ ಇಂದು ಗ್ರಾಮಕ್ಕೆ ಬೇಟಿ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಸಚಿವರನ್ನು ಗೌರವಿಸಿದರು. ತಹಸೀಲ್ದಾರ್ ಶರೀನ್ತಾಜ್,ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್, ಸಚಿವರ ಆಪ್ತ ಡಾ.ಸೋಮಶೇಖರರೆಡ್ಡಿ,ತಾಲೂಕು ಬಿಜೆಪಿ ಅಧ್ಯಕ್ಷ ಅಶೋಕ್ರೆಡ್ಡಿ, ಮುಖಂಡರಾದ ಲಕ್ಷ್ಮಣಗೌಡ,ರಾಮಾಂಜಿ,ರೋಣೂರುಚಂದ್ರು, ಎ.ವೆಂಕಟರೆಡ್ಡಿ, ಕೆ.ಕೆ.ಮಂಜು, ನಿವೃತ್ತ ಉಪನ್ಯಾಸಕ ವಿಚೌಡರೆಡ್ಡಿ ಚಂದ್ರಶೇಖರ್, ಸೀತಾರಾಮರೆಡ್ಡಿ,ಫಾರೆಸ್ಟರ್ಅಶ್ವತ್ಥರೆಡ್ಡಿ ನಾರಾಯಣಸ್ವಾಮಿ, ರತ್ನಪ್ಪ, ರಾಮಕೃಷ್ಣಾರೆಡ್ಡಿ ಮುಂತಾದವರು ಇದ್ದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8