ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನೆವೇರಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಲೋಕಕಲ್ಯಾಣಾರ್ಥ ವಿಜಯಿ ಯಾತ್ರೆಯಲ್ಲಿರುವ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ಸೋಮವಾರ ಸಂಜೆ 5 ಗಂಟೆಗೆ ಶ್ರೀನಿವಾಸಪುರ ಪುರ ಪ್ರವೇಶ ಮಾಡಲಿದ್ದಾರೆ ಅವರನ್ನು ವೇದಘೋಷ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಮಾಡಲಿರುವುದಾಗಿ ವಿಪ್ರ ಸಂಘದ ದಿವಾಕರ್ ಮತ್ತು ಶಂಕರಮಠದ ಮೇನೆಜರ್ ಶ್ರೀನಿವಾಸನ್ ತಿಳಿಸಿರುತ್ತಾರೆ.
ಸೋಮವಾರ ಸಂಜೆ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳಿಗೆ ಶಂಕರ ಮಠದಲ್ಲಿ ಪಾದುಕ ಪೂಜೆ ಫಲ ಸಮರ್ಪಣೆ ಅದ ನಂತರ ಗುರುಗಳಿಂದ ಅನುಗ್ರಹ ಭಾಷಣ ಮತ್ತು ಶ್ರೀ ಚಂದ್ರಮೌಳೇಶ್ವರ ಪೂಜಾ ಅನುಷ್ಠಾನ ಇರುತ್ತದೆ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮಗಳ ನಡೆಯಲಿದ್ದು ಬುಧವಾರ ಶ್ರೀ ಗಳಿಂದ ಗುರು ದತ್ತಾತ್ರೇಯ ಆದಿ ಶಂಕರಾಚಾರ್ಯ,ಗಾಯಿತ್ರಿ ಮಹಾ ಪೂಜೆ ಹಾಗು ನವ ಚಂಡಿ ಮತ್ತು ರುದ್ರ ಹೋಮ ಪೂರ್ಣಾಹುತಿ ಆದ ನಂತರ ಶ್ರೀ ಶಂಕರ ಮಠದ ವಿಮಾನಗೋಪುರದ ಕುಂಭಾಭಿಷೇಕ ಸಾರ್ವಜನಿಕರಿಗೆ ಶ್ರೀ ಗಳ ದರ್ಶನ ಮತ್ತು ಫಲಮಂತ್ರಾಕ್ಷತೆ ಕಾರ್ಯ ನಡೆಯಲಿದೆ ಎಂದು ತಿಳಿಸಿರುತ್ತಾರೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8