ಶ್ರೀನಿವಾಸಪುರ:-ಮದನಪಲ್ಲಿಯಲ್ಲಿ ನಾಳೆ ಜುಲೈ 6 ಬುಧವಾರ ನಡೆಯಲಿರುವ ತೆಲಗುದೇಶಂ ಪಕ್ಷದ ಕ್ಷೇತ್ರಮಟ್ಟದ ಸಮಾವೇಶ ಹಾಗು ಬಹಿರಂಗ ಸಭೆ,ಮಿನಿಮಹಾನಾಡು ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಭಾಗವಹಿಸುತ್ತಿದ್ದು ಅವರು ನಾಳೆ ವಿಜಯವಾಡ ನಗರದಿಂದ ಬೆಂಗಳೂರು ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗಮಿಸಿ ನಂತರ ಮಧ್ಹಾನಃ ಸುಮಾರು 2 ಗಂಟೆಗೆ ರಸ್ತೆಮಾರ್ಗದ ಮೂಲಕ ಹೆಚ್ ಕ್ರಾಸ್,ಮಾಡಿಕೆರೆ ಕ್ರಾಸ್ ತಾಲೂಕಿನ ತಾಡಿಗೊಳ್ ಕ್ರಾಸ್ ಮೂಲಕ ಮದನಪಲ್ಲಿಗೆ ತೆರಳಲಿದ್ದಾರೆ.
ಆಂಧ್ರದ ರಾಯಸೀಮೆಯ ಹೆಬ್ಬಾಗಿಲು ಆಗಿರುವ ಆಂಧ್ರಪ್ರದೇಶದ ರಾಜಂಪೇಟ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮದನಪಲ್ಲಿಯಲ್ಲಿ ನಡೆಯಲಿರುವ ತೆಲಗು ದೇಶಂ ಕಾರ್ಯಕ್ರಮದಲ್ಲಿ ಶ್ರೀನಿವಾಸಪುರ ತಾಲೂಕು ಕೋಡಿಪಲ್ಲಿ ಪಂಚಾಯಿತಿ ವ್ಯಾಪ್ತಿಯ ಕೊಂಡಾಮರಿ ಬಳಿಯ ಕಲ್ಲುಕ್ವಾರಿ ಮಾಲಿಕ ಹಾಗು ಮದನಪಲ್ಲಿ ವಿಧಾನಸಭಾ ಕ್ಷೇತ್ರದ ತೆಲಗುದೇಶಂ ಪಕ್ಷದ ಅಭ್ಯರ್ಥಿ ಅಕಾಂಕ್ಷಿಯಾಗಿರುವ ಜಯರಾಮ ನಾಯ್ಡು ತಾಡಿಗೊಳ್ ಕ್ರಾಸ್(ಪೈ ಕ್ರಾಸ್) ಬಳಿ ಚಂದ್ರಬಾಬು ನಾಯುಡು ಅವರಿಗೆ ದೊಡ್ಡ ಮಟ್ಟದ ಸ್ವಾಗತ ಕೋರುವ ಮೂಲಕ ಕರ್ನಾಟಕದಲ್ಲೂ ತಮ್ಮ ಹವಾ ಇರುವುದನ್ನು ಆಂಧ್ರದ ಮಾಜಿ ಸಿಎಂ ಗೆ ತೋರಿಸಲು ಶಕ್ತಿ ಪ್ರದರ್ಶನಕ್ಕೆ ತಯಾರಿ ನಡೆಸಿದ್ದಾರೆ.
ದೊಡ್ಡ ಮಟ್ಟದಲ್ಲಿ ಕಾರ್ಯಕರ್ತರೊಂದಿಗೆ ಗಜಮಾಲೆ ಸ್ವಾಗತ ಕೋರಿ ನಂತರ ಅವರೊಂದಿಗೆ ಮಿನಿಮಹಾನಾಡು ಕಾರ್ಯಕ್ರಮಕ್ಕೆ ಹೋಗಲಿರುವುದಾಗಿ ಸ್ವತಃ ಜಯರಾಮ ನಾಯ್ಡು vcsnewz.com ಗೆ ತಿಳಿಸಿರುತ್ತಾರೆ.
Breaking News
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
Thursday, April 17