ಶ್ರೀನಿವಾಸಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ನನ್ನು ಶ್ರೀನಿವಾಸಪುರ ಅಬಕಾರಿ ಅಧಿಕಾರಿಗಳು ಬಂಧಸಿರುತ್ತಾರೆ.ಆಂಧ್ರದ ಅನ್ನಮಯ್ಯ ಜಿಲ್ಲೆಯ ಚಂಬಕೂರಿಗೆ ಹೊಂದಿಕೊಂಡಿರುವ ಗಡಿಯಂಚಿನ ಗ್ರಾಮವಾದ ತಾಲೂಕಿನ ಪುಲಗುರುಕೊಟೆ ಗ್ರಾಮದ ವೆಂಕಟರಮಣಪ್ಪ ಎಂಬುವನನ್ನು ಬಂದಿಸಿದ ಅಬಕಾರಿ ಅಧಿಕಾರಿಗಳು ಸುಮಾರು 50 ಸಾವಿರ ಮೌಲ್ಯದ 1 ಕೆಜಿಗಿಂತಲೂ ಹೆಚ್ಚಿನ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡಿರುತ್ತಾರೆ.
ವೆಂಕಟರಮಣಪ್ಪ ಆಂಧ್ರದಿಂದ ಗಾಂಜಾ ತಂದು ಇಲ್ಲಿ ಮಾರಾಟ ಮಾಡುತಿದ್ದ ಎಂದು ಹೇಳಲಾಗಿದ್ದು ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುತ್ತಾರೆ.
ಅರೋಪಿಯನ್ನ ಅಧಿಕಾರಿಗಳು ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪ್ತಿಯಲ್ಲೂ ಅಕ್ರಮ ಗಾಂಜ ವ್ಯವಹಾರ ನಡೆಯುತ್ತಿರುವ ಬಗ್ಗೆ ಇತ್ತಿಚಿಗೆ ಅಬಕಾರಿ ಅಧಿಕಾರಿಗಳು ಕೆಲವರನ್ನು ಕರೆದೊಯಿದು ವಿಚಾರಣೆಗೆ ಒಳಪಡಿಸಿದ ಬಗ್ಗೆ ಹೇಳುತ್ತಾರೆ.
ಕಳೆದ ಕೆಲವು ದಿನಗಳ ಹೊಂದೆ ಮುಳಬಾಗಿಲು ತಾಲೂಕಿನಲ್ಲೊಂದು ನಡೆದ ಅಕ್ರಮ ಗಾಂಜಾ ವ್ಯವಹಾರದಲ್ಲಿ ಅಲ್ಲಿನ ಅಬಕಾರಿ ಅಧಿಕಾರಿಗಳು ದಂಪತಿಯನ್ನು ಬಂದಿಸಿದ್ದು ಅವರ ನೀಡಿದ ಮಾಹಿತಿಯಂತೆ ತಾಲೂಕಿನ ಪುರ್ನಪಲ್ಲಿ ಗ್ರಾಮದ ವ್ಯಕ್ತಿಯನ್ನು ಕರೆದೊಯಿದು ವಿಚಾರಣೆ ನಡೆಸಿರುತ್ತಾರೆ.
Breaking News
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
Tuesday, April 8