ನ್ಯೂಜ್ ಡೆಸ್ಕ್: ಹುಡಗಿರಿಗಾಗಿ ಹುಡುಗರು ಬಡಿದಾಡಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ಜೆಸ್ಟ್ ಫಾರ್ ಚೇಂಜ್ ಒರ್ವ ಹುಡುಗನಿಗಾಗಿ ಇಬ್ಬರು ಹುಡುಗಿಯರು ಸಾರ್ವಜನಿಕವಾಗಿ ನಡಿ ಬಸ್ಟಾಂಡಿನಲ್ಲಿ ಜಗಳವಾಡಿ ಬಡಿದಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ
ಇದು ಕೇಳಲು ವಿಚಿತ್ರ ಎನಿಸಿದರೂ ನಡೆದಿರುವುದು ನಿಜ ಇತ್ತೀಚೆಗಷ್ಟೇ ಬಾಯ್ ಫ್ರೆಂಡ್ನ ವಿಚಾರವಾಗಿ ಇಬ್ಬರು ಹುಡುಗಿಯರು ಜಗಳವಾಡುತ್ತಿರುವ ದೃಶ್ಯಗಳು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಚಿತ್ರಣವಾಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಾರಾಷ್ಟ್ರದ ಪೈಥಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೈಥಾನ್ ನಗರದ ಬಸ್ ನಿಲ್ದಾಣದಲ್ಲಿ ನಡೆದ ಈ ಘಟನೆಯಲ್ಲಿ ಬಡಿದಾಡಿಕೊಂಡ ಬಾಲಕಿಯರಿಬ್ಬರನ್ನೂ ಪೊಲೀಸರು ಕರೆದೊಯ್ದು ಕೌನ್ಸೆಲಿಂಗ್ ನೀಡುವ ಮೂಲಕ ಬುದ್ದಿ ಹೇಳಿ ಬಿಡುಗಡೆಗೊಳಿಸಿದ್ದಾರೆ. ಪೊಲೀಸರ ಪ್ರಕಾರ, ಯುವತಿಯೊಬ್ಬಳು ಯುವಕನೊಂದಿಗೆ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ ಈ ವಿಷಯ ತಿಳಿದ ಮತ್ತೊಬ್ಬ ಹದಿಹರೆಯದ ಯುವತಿ ಅದೇ ಯುವಕನಿಗಾಗಿ ಬಸ್ ನಿಲ್ದಾಣಕ್ಕೆ ಬರುತ್ತಾಳೆ ಯುವಕ ಮತ್ತೊಬ್ಬ ಯುವತಿಯೊಂದಿಗೆ ಇರುವುದನ್ನು ನೋಡಿ ಕೋಪಗೊಂಡ ಆಕೆ ಬಾಯ್ ಫ್ರೆಂಡ್ ಜೊತೆಗಿದ್ದ ಯುವತಿಯ ವಿರುದ್ದ ಜಗಳ ಕಾಯ್ದಿದ್ದಾಳೆ ಪರಸ್ಪರ ಮುಷ್ಟಿ,ಗುದ್ದಾಟ ನಡೆಸಿದ್ದಾರೆ. ಜುಟ್ಟು ಹಿಡಿದು ಬೈದಾಡಿಕೊಂಡಿದ್ದಾರೆ ಯಾರಿಗೆ ಯಾರು ಕಡಿಮೆ ಇಲ್ಲದಂತೆ ವರ್ತಿಸಿದ್ದಾರೆ ಇದನ್ನು ನೋಡಿದ ಸುರಸುಂದರಾಂಗ ಯುವಕ ತನಗೇನು ಗ್ರಹಚಾರ ಕಾದಿದೀಯೋ ಎಂಬಂತೆ ಮೆತ್ತಗೆ ಜಾಗಕಾಲಿಮಾಡಿದ್ದಾನೆ. ಈ ಎಲ್ಲಾ ಬೆಳವಣಿಗಳಾಗುತ್ತಲೆ ಸ್ಥಳಕ್ಕೆ ಆಗಮಿಸಿದ ಪೋಲಿಸರು ಹದಿಹರೆಯದ ಯುವತಿಯರನ್ನು ಠಾಣೆಗೆ ಕರೆದೊಯ್ದು ಕೌನ್ಸೆಲಿಂಗ್ ನೀಡಿ ಇನ್ನೊಮ್ಮೆ ಈ ರೀತಿ ಮಾಡಿದರೆ ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಬೇಕಾಗುತ್ತದೆ ಎಂದು ಎಚ್ಚರಿಸಿ ಕಳಿಸಿರುತ್ತಾರೆ.
Breaking News
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
Thursday, April 17