ಶ್ರೀನಿವಾಸಪುರ:ಸಾರ್ವಜನಿಕ ಜೀವನದಲ್ಲಿ ಇರುವಂತ ವ್ಯಕ್ತಿಗಳ ಹುಟ್ಟುಹಬ್ಬದ ಕಾರ್ಯಕ್ರಮಗಳು ಸಾರ್ವಜನಿಕವಾಗಿ ಆಚರಿಸಿಕೊಂಡಾಗ ಅವರ ಬದುಕಿನಲ್ಲಿ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಹೇಳಿದರು ಅವರು ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣರವರ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಮತ್ತು ರಾಜಣ್ಣ ಅಭಿಮಾನಿಗಳು ತಾಲೂಕಿನ ಅರಿಕುಂಟೆ ವೃದ್ಧಾಶ್ರಮದ ಹಿರಿಯ ನಾಗರಿಕರಿಗೆ ಸ್ವೇಟರ್ ಹಾಗು ಇತರೆ ಪರಿಕರಗಳನ್ನು ವಿತರಿಸಿ ಮಾತನಾಡಿ ಹುಟ್ಟುಹಬ್ಬದ ಆಚರಣೆ ಅರ್ಥ ಪೂರ್ಣವಾಗಿದ್ದಾಗ ಅದಕ್ಕೆ ಗೌರವ ಹೆಚ್ಚಾಗುತ್ತದೆ ಎಂದರು.
ಇಂದಿರಾಭವನ್ ರಾಜಣ್ಣ ಮಾತನಾಡಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಅಭಿಮಾನದಿಂದ ಆಯೋಜಿಸುವ ಕಾರ್ಯಕ್ರಮಗಳಿಗೆ ಬೆಲೆ ಕಟ್ಟಲಾಗದ್ದು ಅವರಿಗೆ ಚಿರಋಣಿ ಎಂದರು ಇದೇ ಸಂದರ್ಭದಲ್ಲಿ ಇಂದಿರಾಭವನ್ ವೃತ್ತದಲ್ಲಿ ಕೆಕ್ ಕತ್ತರಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಸದಸ್ಯ ಮಂಜುನಾಥಗೌಡ,ಜಗದೀಶ್,ಕಾರ್ ಬಾಬು,ಉದ್ಯಮಿ ಅಂಬೇಡ್ಕರ್ ಪಾಳ್ಯ ರವಿ, ಗೋರವಿಮಾಕಲಹಳ್ಳಿಶ್ರೀನಿವಾಸ್,ಗುರುಮೂರ್ತಿ,ಅವಲಕುಪ್ಪರಾಮಚಂದ್ರ,ಜಗನ್,ಬಿ.ಎಲ್.ದುರ್ಗ,ಪ್ರೇಮ್,ಪೂಲುಶಿವಾರೆಡ್ಡಿ ಮುಂತಾದವರು ಇದ್ದರು.
Breaking News
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
Saturday, April 12