ಶ್ರೀನಿವಾಸಪುರ:ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಡೆಗಣಿಸಿದರೆ ಪಕ್ಷ ಮೂಲೆಗುಂಪಾಗುತ್ತದೆ ಆಂಧ್ರದಲ್ಲಿ ಕಾಂಗ್ರೆಸ್ ಗೆ ಬಂದಿರುವ ಗತಿ ಬರುತ್ತದೆ ಎಂದು ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಮಾತನ್ನು ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ಪರವಾಗಿ ಸಂದೇಶ ರವಾನಿಸಿದ್ದಾರೆ.
ಕುರುಬಸಮಾಜದವರ ಬೆಂಬಲ ಕೋರಿ ಕನಕ ಭವನದಲ್ಲಿ ಶ್ರೀನಿವಾಸಪುರ ತಾಲೂಕಿನ ಕುರುಬ ಸಮುದಾಯದವರ ಸಭೆ ನಡೆಸಿ ಮಾತನಾಡಿದ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಸೈಡ್ ಲೈನ್ ಮಾಡಿ ಅವರ ಸ್ಥಾನಕ್ಕೆ ನಾನು ಬರಬಹುದು ಎಂಬ ಲೆಕ್ಕಾಚಾರ ಯಾರಿಗಾದರೂ ಇದ್ದರೆ ಕಾಂಗ್ರೆಸ್ ರಾಜ್ಯದಲ್ಲಿ ಪ್ರತಿಪಕ್ಷ ಸ್ಥಾನದಲ್ಲಿ ಕೂರಬೇಕಾಗುತ್ತದೆ ಎಂದರು.
ಕೆಲವರು ಸಿದ್ದರಾಮಯ್ಯ ಅವರ ಬೆನ್ನಮೇಲೆ ಕೈಹಾಕಿಕೊಂಡು ಕರೆದುಕೊಂಡು ಹೋಗಿ ವರುಣಾದಲ್ಲಿ ನಿಲ್ಲಿಸಿ ಸೋಲಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು, ಇವತ್ತು ರಾಹುಲ್ ಗಾಂಧಿಗೆ ಸರಿಸಮನಾಗಿ ವಿರೋಧ ಪಕ್ಷಗಳನ್ನು ಎದರಿಸುವ ತಾಕತ್ತು ಕೇವಲ ಸಿದ್ದರಾಮಯ್ಯ ಅವರಿಗೆ ಮಾತ್ರ ಇದ್ದು ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ದಿಸಿದರೆ ಹಿಂದುಳಿದ ಅಲ್ಪಸಂಖ್ಯಾತ ಪರಿಶಿಷ್ಟರು ಮತ ನೀಡಿ ಗೆಲ್ಲಿಸುತ್ತಾರೆ ಇದನ್ನು ಸಹಿಸದ ಕೆಲವರು ಹೊಟ್ಟೆಕಿಚ್ಚು ಬಿಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು ನನ್ನ ಮೆಲೆ ಅಭಿಮಾನ ಇಟ್ಟು ಕುರುಬಸಮಾಜ ಒಗ್ಗಾಟ್ಟಾಗಿ ನನ್ನನ್ನು ಬೆಂಬಲಿಸುವಂತೆ ಕೋರಿದರು ಸಭೆಯಲ್ಲಿ ಕುರುಬ ಸಂಘದ ತಾಲೂಕು ಅಧ್ಯಕ್ಷ ಎಂ.ವೇಮಣ್ಣ,ಮಾಜಿ ಅಧ್ಯಕ್ಷೆ ಕಶೇಟ್ಟಳ್ಳಿ ಸುಜಾತಮ್ಮ,ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಯಲ್ದೂರು ಗೌರಮ್ಮ,ಗಂಗಾಧರ್,ಪಾತಮುತ್ತಕಪಲ್ಲಿಅಂಜನೇಯಗೌಡ, ಕೋಲಾರ ಸೋಮಶೇಖರ್, ವೆಂಕಟರಮಣಪ್ಪ ಮುಂತಾದವರು ಇದ್ದರು.
Breaking News
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
Monday, April 7