ಶ್ರೀನಿವಾಸಪುರ: ವಿಧಾನಸಭಾ ಕ್ಷೇತ್ರದಲ್ಲಿ ಸತತ 45 ವರ್ಷಗಳಿಂದ ರಾಜಕಾರಣ ಇಬ್ಬರು ವ್ಯಕ್ತಿಗಳ ನಡುವೆ ನಡೆಯುತ್ತಿದ್ದು ಇದರ ಪರಿಣಾಮ ಕ್ಷೇತ್ರ ಅಭಿವೃದ್ಧಿಯಾಗದೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಈ ಬಾರಿ ಬದಲಾವಣೆ ತರಲು ಇಲ್ಲಿನ ಜನ ಸ್ವಯಂ ಪ್ರೇರಿತರಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಗುಂಜೂರು ಆರ್ ಶ್ರೀನಿವಾಸರೆಡ್ಡಿ ಹೇಳಿದರು ಅವರು ತಾಲೂಕಿನ ರಾಯಲ್ಪಾಡು ಹೋಬಳಿಯಲ್ಲಿ ಮನೆಮನೆಗೂ ತೆರಳಿ ಪ್ರಚಾರ ಮಾಡಿ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆಮಾಡಿಕೊಂಡು ಮಾತನಾಡಿದರು.
ಬಿಜೆಪಿಗೆ ಉತ್ತಮ ಸ್ಪಂದನೆ ಇದ್ದು ಗ್ರಾಮಗಳಲ್ಲಿ ಜನತೆ ಆಪ್ಯಾಯತೆಯಿಂದ ನನ್ನನ್ನು ಬರಮಾಡಿಕೊಳ್ಳುತ್ತಿದ್ದಾರೆ ಜೊತೆಗೆ ಯುವ ಸಮುದಾಯ ದೊಡ್ಡಮಟ್ಟದಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ನನಗೆ ಹುಮ್ಮಸ್ಸು ತಂದಿದೆ ಎಂದರು.
ಡಬಲ್ ಇಂಜಿನ್ ಸರ್ಕಾರದ ಡಬಲ್ ಧಮಾಕ
ರಾಷ್ಟ್ರೀಯವಾದದ ಚಿಂತನೆಯ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಅತ್ಯತ್ತಮವಾಗಿ ನೇರವೇರಿಸಿದೆ ರಾಜ್ಯದಲ್ಲಿ ವಿಶೇಷವಾಗಿ ಉತ್ತಮ ಗುಣಮಟ್ಟದ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ ಇನ್ನೂ ಹಲವಾರು ಯೋಜನೆಗಳ ಅನುಷ್ಠಾನ ರಾಜ್ಯದಲ್ಲಿ ಆಗಬೇಕಿದ್ದು ಅದಕ್ಕಾಗಿ ಜನತೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಆಶೋಕರೆಡ್ದಿ,ನಿವೃತ್ತ ಶಿಕ್ಷಕ ಮದರಂಕಪಲ್ಲಿಪಾಪಿರೆಡ್ಡಿ,ತಾಲೂಕುಪಂಚಾಯಿತಿ ಮಾಜಿ ಸದಸ್ಯ ರಾಜಶೇಖರೆಡ್ಡಿ ಮುಂತಾದವರು ಇದ್ದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8