ಶ್ರೀನಿವಾಸಪುರ:ಮತದಾನ ಮುಗಿದಂತೆ ಎಕ್ಸಿಟ್ ಪೋಲ್ಗಳ ಸಮೀಕ್ಷೆಗಳು ಹೊರಬಿದ್ದಿವೆ.ಚುನಾವಣೆ ಫಲಿತಾಂಶಕ್ಕೆ ಇನ್ನೊಂದೇರಡು ದಿನ ಸಮಯ ಇದೆ, ಈಗೇನಿದ್ದರು ಅಭ್ಯರ್ಥಿ ಗೆಲ್ಲುವ ಬಗ್ಗೆ ಬೆಟ್ಟಿಂಗ್ ಮಾತು ಹೈವೋಲ್ಟೇಜ್ ಕ್ಷೇತ್ರಗಳಾದ ಶ್ರೀನಿವಾಸಪುರ,ಚಿಂತಾಮಣಿ,ಕೋಲಾರದ ಚುನಾವಣೆಗೆ ಬಾಜಿ ಕಟ್ಟುವವರ ಸಂಖ್ಯೆ ಹೆಚ್ಚಾಗಿದೆ.ಐಪಿಎಲ್ ಬೆಟ್ಟಿಂಗ್ ಮೀರಿಸುವ ರೀತಿ ಲಕ್ಷ ಲಕ್ಷಗಳಲ್ಲಿ ಯಾವ ಪಕ್ಷ ಗೆಲ್ಲುತ್ತೆ ಎಂಬ ಬಗ್ಗೆ ಬೆಟ್ಟಿಂಗ್ ಕಟ್ಟಲಾಗುತ್ತಿದೆ.
ವಿಶೇಷವಾಗಿ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಕುಮಾರ್(ಸ್ವಾಮಿ) ಹಾಗೂ ಜೆಡಿಎಸ್ ಅಭ್ಯರ್ಥಿ ವೆಂಕಟಶಿವಾರೆಡ್ಡಿ(ರೆಡ್ಡಿ) ಪರವಾಗಿ ಬೆಟ್ಟಿಂಗ್ ಹೆಚ್ಚಾಗಿ ನಡೆಯುತ್ತಿದೆ.
ಕಳೆದ ಇಪ್ಪತ್ತು-ಇಪ್ಪತೈದು ದಿನಗಳಿಂದ ಸ್ನೇಹತ್ವ ಬಂಧುತ್ವ ಬದಿಗಿಟ್ಟು ಆಜನ್ಮ ವೈರಿಗಳಂತೆ ಚುನಾವಣೆ ನಡೆಸಿದಂತ ರಾಜಕೀಯ ಪಕ್ಷಗಳ ಕಾರ್ಯಕರ್ತರು ಈಗ ಒಂದಾಗಿದ್ದಾರೆ,ಸಿಗರೇಟಿನ ಧಮ್ ಏಳೆಯುತ್ತ ಕಾಫಿ ಕುಡಿಯುತ್ತ ಅದು ಹಾಗಲ್ಲ ನಿಮ್ಮದು ವರ್ಕೌಟ್ ಆಗಿಲ್ಲ ನೀವು ಫೈಲೂರು ಆದ ಜಾಗದಲ್ಲಿ ನಾವು ವರ್ಕೌಟ್ ಮಾಡಿ ಮತ ಗಳಿಸಿದ್ದೀವಿ ಆ ಬೂತ್ ನಲ್ಲಿ ನಮ್ಮ ಅಭ್ಯರ್ಥಿ ಗೆಲ್ತಾರೆ ಇಲ್ಲ ನೊ ಚಾನ್ಸ್ ನಮ್ಮವರೆ ಗೆಲ್ತಾರೆ ಎಂದು ಚಾಲೆಂಜಿಂಗ್ ಮಾತುಗಳು ಆಡುತ್ತಿದ್ದಾರೆ, ಹಾಗದ್ರೆ ಕಟ್ತಿಯಾ ಎಷ್ಟಕ್ಕೆ ಎಷ್ಟಿರಲಿ ನಂದು ಇಷ್ಟಾದ್ರೆ ನಿಂದು ಎಷ್ಟು ಎಂಬ ಮಾತುಗಳು ಕಾಫಿ ಅಂಗಡಿಗಳು ಹೋಟೆಲ್ ಜ್ಯೂಸ್ ಪಾರ್ಲರಗಳ ಬಳಿ ನಡೆಯುತ್ತಿರುವಂತಹದು.ಅಭ್ಯರ್ಥಿ ಗೆಲ್ಲುವ ಕುರಿತಾಗಿ ಕಾರ್ಯಕರ್ತರು ಸುಡು ಬಿಸಲಿಗಿಂತ ಹಾಟ್ ಆಗಿ ರಿಯಾಕ್ಟ್ ಆಗುತ್ತಾರೆ ದುಡ್ಡಿಗೆ ದುಡ್ಡು ಎನ್ನುವಂತೆ ಮಾತುಗಳಿಗೇನು ಕಡಿಮೆ ಇಲ್ಲ ಎಂದು ಕಾರ್ಯಕರ್ತರು ಬೆಟ್ಟಿಂಗ್ ಬಹಿರಂಗವಾಗಿ ಕಟ್ಟೋದಿಲ್ಲ, ಎಲ್ಲವು ಗುಟ್ಟು ಗುಟ್ಟಾಗಿ ನಡೆದು ಎಲೆಕ್ಷನ್ ಹೆಸರಲ್ಲಿ ನಾವು ನಾವೆ ಸಾರ್ ಎಂದು ಎಂದು ಫ್ರೆಂಡ್ಲಿ ಮಾತುಗಳನ್ನಾಡುತ್ತಾರೆ.
ಕಾರ್ಯಕರ್ತರ ಕುತೂಹಲಕ್ಕೆ ತೆರೆ ಬೀಳಲು ಇನ್ನೊಂದು ದಿನ ಬಾಕಿ ಇದೆ ಯಾರು ಗೆಲ್ತಾರೊ ಯಾರು ಸೋಲ್ತಾರೊ, ಯಾರಿಗೆ ಲಾಭನೊ ಯಾರಿಗೆ ನಷ್ಟ ಅಗುತ್ತದೊ ಇದಕ್ಕೆ ಮತ ಎಣಿಕೆ ಆಗುವವರಿಗೂ ಕಾಯಲೇ ಬೇಕು.ಬೆಟ್ಟಿಂಗ್ ಗೆದ್ದವನು ಈರಭದ್ರ ಸೋತವನು ಕೊಡಂಗಿ ಆಟ ಇದು.
Breaking News
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
Monday, April 7