ಶ್ರೀನಿವಾಸಪುರ :ಪೆಟ್ರೋಲ್ ಹಾಗು ಡೀಸಲ್ ಬಳಕೆಯಿಂದ ಪ್ರಕೃತಿಯ ಮೇಲೆ ತೀವ್ರ ಪರಿಣಾಮ ಬಿರುತ್ತಿದೆ ಪ್ರಕೃತಿಯನ್ನು ಉಳಸಿಕೊಳ್ಳಲು ಪರ್ಯಾಯ ಇಂದನ ಬಳಕೆಗೆ ವಾಹನ ಬಳಕೆದಾರರು ಮುಂದಾಗಬೇಕಿದೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು.
ಅವರು ಪಟ್ಟಣದ ಚಿಂತಾಮಣಿ ರಸ್ತೆಯ ರಾಜಧಾನಿ ಪೆಟ್ರೋಲ್ ಬಂಕ್ ನಲ್ಲಿ ಸಿಎನ್ಜಿ ಗ್ಯಾಸ್ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಜಿಪಿ ಸಿ.ಎನ್.ಜಿ ಗ್ಯಾಸ್ ಸಂಸ್ಥೆಯ ಪ್ರಾಂತೀಯ ವ್ಯವಸ್ಥಾಪಕ ವೆಂಕಟೇಶ್ ಮಾತನಾಡಿ ಡೀಸೆಲ್, ಪೆಟ್ರೋಲ್ ಗೆ ಪರ್ಯಾಯವಾಗಿ ಸಿ.ಎನ್.ಜಿ ಬಳಕೆ ಹೆಚ್ಚುತ್ತಿದೆ ಎಂದರು ಸಿ.ಎನ್.ಜಿ ಮೀಥೇನ್ನಿಂದ ಕೂಡಿದ
ನೈಸರ್ಗಿಕ ಅನಿಲವಾಗಿದ್ದು ವಿಶೇಷವಾಗಿ ವಾತಾವರಣ ಕಲುಷಿತಗೊಳಿಸದೆ ಪರಿಣಾಮಕಾಯಾಗಿ ಬಳಸಬಹುದಾಗಿದೆ ಎಂದರು.
ಕೋಲಾರ ಜಿಲ್ಲೆಯಲ್ಲಿ 6 ಸಿ.ಎನ್.ಜಿ ಕೇಂದ್ರಗಳು ಪ್ರಾರಂಭವಾಗಲಿದ್ದು ಪ್ರಥಮ ಕೇಂದ್ರವಾಗಿ ಶ್ರೀನಿವಾಸಪುರದ ರಾಜಧಾನಿ ಬಂಕ್ ನಲ್ಲಿ ನಮ್ಮ ಎಜಿಪಿ ಸಂಸ್ಥೆಯ ಸಿಎನ್ಜಿ ಗ್ಯಾಸ್ ಬಂಕ್ನ್ನು ತೆರೆಯಲಾಗಿದ್ದು, ಅವಶ್ಯಕತೆ ಇರುವವರಿಗೆ
ಸಿ.ಎನ್.ಜಿ ಗ್ಯಾಸ್ ಕಿಟ್ ಅನ್ನು ಸಬ್ಸಿಡಿ ದರದಲ್ಲಿ ಕೊಡಲಾಗುವುದು . ಗ್ರಾಹಕರು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ರಿಜನಲ್ ಮುಖ್ಯಸ್ಥ ಕೆಆರ್ ವೆಂಕಟೇಶ್ ಮಾತನಾಡಿ ನಮ್ಮ ಕಂಪನಿಯಿಂದ ಗ್ರಾಹಕರ ಗ್ಯಾಸ್ಗೆ ಸಂಬಂದಿಸಿದ ಸಮಸ್ಯೆಗಳನ್ನು ಸ್ಪಂದಿಸುವ ನಿಟ್ಟಿನಲ್ಲಿ 24×7ಅವಧಿಯಲ್ಲಿ ಸೇವೆಗಳನ್ನು ನಮ್ಮ ಸಿಬ್ಬಂದಿಗಳು ಓದಗಿಸಲಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ರಾಜಧಾನಿ ಸಂಸ್ಥೆ ಮುಖ್ಯಸ್ಥ ಮುಜಾಹಿದ್ ಅನ್ಸಾರಿ,ಪುರಸಭೆ ಉಪಾಧ್ಯಕ್ಷೆ ಆಯೀಷನಯಾಜ್, ಸದಸ್ಯ ಏಜಾಜ್ಪಾಷ, ಜಿಲ್ಲಾ ಪಂಚಾಯಿತಿ ಮಾಜಿ ಸದ್ಯಸ ತೂಪಲ್ಲಿ ಆರ್.ನಾರಾಯಣಸ್ವಾಮಿ, ಮುಖಂಡರಾದ ಲಕ್ಷ್ಮಣರೆಡ್ಡಿ,ಮನು,ಎಪಿಜಿ ಗ್ಯಾಸ್ ಕಂಪನಿ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್.ಅಶಿತ್ ಇನ್ನು ಹಲವರು ಇದ್ದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Saturday, September 7