ಬೆಂಗಳೂರು:ಇಂದು ಶ್ರೀನಿವಾಸಪುರಕ್ಕೆ ಆಗಮಿಸಬೇಕಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಗ್ಯದಲ್ಲಿ ದೀಡೀರ್ ಏರುಪೇರಾದ ಕಾರಣ ಅವರನ್ನು ಬುಧವಾರ ಮುಂಜಾನೆ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು.
ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಇಂದು ಬುಧವಾರ ಶ್ರೀನಿವಾಸಪುರಕ್ಕೆ ಆಗಮಿಸಿ ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು,ಹಲವು ವರ್ಷಗಳಿಂದ ರೈತರು ಹಾಗೂ ಅರಣ್ಯ ಇಲಾಖೆ ನಡುವೆ ನ್ಯಾಯಾಲಯದಲ್ಲಿ ಭೂ ವಿವಾದವಿದ್ದು,ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ, ಚಿಂತಕುಂಟ, ಕೇತಗಾನಹಳ್ಳಿ ಬಳಿ ಕಳೆದ ಮೂರು ದಿನಗಳಲ್ಲಿ ಸುಮಾರು 560 ಎಕರೆ ಒತ್ತುವರಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ನಡೆದಿದೆ. ತೆರವು ಕಾರ್ಯಾಚರಣೆ ವೇಳೆ ಕೋಳಿ ಫಾರಂಗಳು, ಮಾವಿನ ಮರಗಳು, ಎಲೆಕೋಸು, ಕ್ಯಾಪ್ಸಿಕಂ ಹಾಗೂ ಇತರೆ ಬೆಳೆಗಳು, ಪಂಪ್ ಸೆಟ್, ಬೋರ್ ವೆಲ್ ಎಲ್ಲವನ್ನೂ ತೆರವು ಮಾಡಿ ನಾಶಪಡಿಸಿದ ಆರೋಪ ಕೇಳಿಬಂದಿತ್ತು ಅದರಂತೆ ನಷ್ಟಕ್ಕೆ ಒಳಗಾಗಿರುವ ರೈತರ ಬೆಳೆಗಳು ಪರಶೀಲನೆ ನಡೆಸಿ ರೈತರೊಂದಿಗೆ ಸಂವಾದ ನಡೆಸಲು ಹೆಚ್ಡಿಕೆ ಆಗಮಿಸಲಿದ್ದರು. ಆದರೆ ಏಕಾಏಕಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಹಿನ್ನಲೆಯಲ್ಲಿ ಶ್ರೀನಿವಾಸಪುರ ಪ್ರವಾಸ ದೀಡಿರ್ ರದ್ದಾಗಿದೆ.
ಪುತ್ರನ ನೋಡಲು ಆಸ್ಪತ್ರೆಗೆ ಧಾವಿಸಿದ ದೇವೇಗೌಡರು
ಕುಮಾರಸ್ವಾಮಿ ಆರೋಗ್ಯ ಏರುಪೇರಾಗಿ ಆಸ್ಪತ್ರೆಗೆ ಧಾಖಲಾಗಿರುವ ಹಿನ್ನಲೆಯಲ್ಲಿ ಅವರ ತಂದೆ ದೇವೇಗೌಡರು ಪುತ್ರನ ಆರೋಗ್ಯ ವಿಚಾರಿಸುವ ಸಲುವಾಗಿ ಕುಮಾರ ಸ್ವಾಮಿ ಅವರು ಅಡ್ಮಿಟ್ ಆಗಿರುವ ಜಯನಗರದ ಅಪೋಲೊ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪುತ್ರ ಕುಮಾರ ಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಅಪೋಲೋ ಆಸ್ಪತ್ರೆ ವೈದ್ಯರು ಕುಮಾರ ಸ್ವಾಮಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ತಿಳಿಸಿರುತ್ತಾರೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8