ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕಿನಲ್ಲಿ ನಿರುದ್ಯೊಗ ಸಮಸ್ಯೆ ನಿವಾರಣೆಗೆ ಪಟ್ಟಣಕ್ಕೆ ಹೊಂದಿಕೊಂಡಂತೆ ಕೈಗಾರಿಕ ಪ್ರದೇಶ ನಿರ್ಮಾಣ ಮಾಡಲು ಯೋಜನೆ ಸಿದ್ದಪಡಿಸುತ್ತಿರುವುದಾಗಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು ಅವರು ಇಂದು ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿ ವಿಕ್ಷಿಸಿ ಮಾತನಾಡಿದ ಅವರು ತಾಲೂಕಿಗೆ ಕೈಗಾರಿಕೆಗಳು ಬಂದರೆ ಇಲ್ಲಿನ ನಿರುದ್ಯೊಗಿ ಯುವಕರ ಸಮಸ್ಯೆ ಬಗೆಹರೆಯಲು ಸಹಕಾರಿಯಾಗುತ್ತದೆ ಎಂದರು.
ತಾಲೂಕಿನ ಮುಳಬಾಗಿಲು ರಸ್ತೆ ಅಥಾವ ಪುಂಗನೂರು ರಸ್ತೆಯಲ್ಲಿ ಜಮೀನು ಗುರುತಿಸಿ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡುವ ಕುರಿತಾಗಿ ಕೈಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ರೂಪು ರೇಷೆ ಸಿದ್ದಪಡಿಸುವುದಾಗಿ, ಮಾವು ಟಮ್ಯಾಟೊ ಸೇರಿದಂತೆ ತೋಟಗಾರಿಕೆ ಬೆಳೆಗಳ ಸಂಸ್ಕರಣ ಘಟಕಗಳು ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ನಿರ್ಮಾಣ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.
ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣ
ಕ್ರೀಡಾಂಗಣಕ್ಕೆ ಹೊಂದಿಕೊಂಡಂತೆ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸಂಸದ ಮುನಿಶಾಮಿ ತಮ್ಮ ನಿಧಿಯಿಂದ ಹಣ ನೀಡಲಿದ್ದು ಇದಕ್ಕೆ ಸಂಬಂದಿಸಿದಂತೆ ಜಮೀನು ನೀಡುವುದಾಗಿ ತಿಳಿಸಿದ ಶಾಸಕ ವೆಂಕಟಶಿವಾರೆಡ್ಡಿ ಪಟ್ಟಣದ ಜನರ ಕ್ರೀಡಾಚಟುವಟಿಕೆಗಾಗಿ ಅತ್ಯಾಧುನಿಕವಾಗಿ ಕ್ರೀಡಾಂಗಣ ಸರ್ವರೀತಿಯಲ್ಲೂ ನವೀಕರಣವಾಗುತ್ತಿದೆ ಹಾಗೆ ಸುಸಜ್ಜಿತ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸದ್ಯದಲ್ಲಿಯೆ ಭೂಮಿ ಪೂಜೆ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ,ಲೋಕೋಪಯೋಗಿ ಇಲಾಖೆ ಅಭಿಯಂತರ ಟಿ.ನಾಗರಾಜ್,ಗುತ್ತಿಗೆದಾರರಾದ ಶಿವಾರೆಡ್ಡಿ,ಕಂಬಾಲಹಳ್ಳಿ ಶ್ರೀನಿವಾಸರೆಡ್ಡಿ,ಯುವ ಮುಖಂಡರಾದ ದುರ್ಗಾಪ್ರಸಾದ್,ಗುರುಮೂರ್ತಿ ಮುಂತಾದವರು ಇದ್ದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8