ಶ್ರೀನಿವಾಸಪುರ: ಮಾನಸೀಕವಾಗಿ ಮನನೊಂದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿ ಶಿಗಪಲ್ಲಿ@ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನು ನೇಣಿಗೆ ಶರಣಾದ ತಂದೆಯೊಬ್ಬನ ಕಥೆ,ಕೃಷಿ ಕಾರ್ಮಿಕನಾಗಿದ್ದ ಶಿಗಪಲ್ಲಿ ನಾರಾಯಣಸ್ವಾಮಿ (40) ಹೆಂಡತಿ ಹಾಗು ಇಬ್ಬರು ಮಕ್ಕಳೊಂದಿಗೆ ಗ್ರಾಮದಲ್ಲಿಯೇ ವಾಸವಾಗಿದ್ದ ಇತ್ತಿಚಿಗೆ ಗಂಡ ಹೆಂಡತಿ ನಡುವೆ ಅನ್ಯೊನ್ಯತೆ ಕಡಿಮೆಯಾಗಿ ಪತ್ನಿ ಕಾಣೆಯಾಗುತ್ತಾಳೆ, ಈ ಬಗ್ಗೆ ಗ್ರಾಮದಲ್ಲಿ ಹಲವಾರು ಉಹಾಪೋಹಗಳು ಹರಡುತ್ತವೆ,ನಂತರದ ಬೆಳವಣಿಗೆಯಲ್ಲಿ ಆಕೆ ಕೋಲಾರದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿರುವುದಾಗಿ ಹೇಳುತ್ತಾರೆ,ಇತ್ತ ನಾರಯಣಸ್ವಾಮಿ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಹಳೆಯ ಪ್ರಕರಣಕ್ಕೆ ಸಂಬಂದಿಸಿದಂತೆ ದೂರು ಇದ್ದು ಪೋಲಿಸರು ಕರೆದಾಗ ಠಾಣೆಗೆ ಹೋಗಿಬರುತ್ತಿದ್ದ, ಹೀಗೆ ಹಲವಾರು ರಿತಿಯಲ್ಲಿ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದ ಆತ ತನ್ನ ಇಬ್ಬರು ಮಕ್ಕಳಾದ ಪವನ್ (12) ಮತ್ತು ನಿತಿನ್ (10) ವಿಷ ಕುಡಿಸಿ ತಾನು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಾರೆ.
ಈ ಸಂಬಂಧ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಇನ್ಸಪೇಕ್ಟರ್ ಗೊರವನಕೊಳ್ಳ ಭೇಟಿ ನೀಡಿರುತ್ತಾರೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8