ಶ್ರೀನಿವಾಸಪುರ: ತಾಲೂಕಿನ ದ್ವಾರಸಂದ್ರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವವು ಸಹಸ್ರಾರು ಭಕ್ತರ ನಡುವೆ ಸಂಬ್ರಮ ಸಡಗರದಿಂದ ನೇರವೇರಿತು ವೈದಿಕರು ಮಂತ್ರ ಘೋಷ ಮಂಗಳ ವಾದ್ಯಗಳು ಹಾಗು ತಮಟೆ ವಾದ್ಯಗಳ ನಡುವೆ ಸ್ವಾಮಿ ಉತ್ಸವ ಮೂರ್ತಿಗಳನ್ನು ವಿವಿಧ ಬಗೆಯ ಹೂವು ಹಾಗು ವಸ್ತ್ರಗಳಿಂದ ಅಲಂಕರಿಸಿದ್ದ ಬ್ರಹ್ಮ ರಥದಲ್ಲಿ ಪ್ರತಿಷ್ಠಾಪಿಸಿ ಬಳಿಕ ಭಕ್ತರ ಗೋವಿಂದ ನಾಮಸ್ಮರಣೆ ಜಯಘೋಷಗಳ ನಡುವೆ ರಥವನ್ನು ಎಳೆಯಲಾಯಿತು ಈ ಸಂದರ್ಭದಲಿ ಭಕ್ತರು ರಥಕ್ಕೆ ಬಾಳೆಹಣ್ಣು ಧವನ ಎಸೆದು ಹರಿಕೆ ಸಲ್ಲಿಸಿದರು.ಬ್ರಹ್ಮ ರಥೋತ್ಸವದ ಅಂಗವಾಗಿ ಬೃಹತ್ ಅನ್ನಸಂತರ್ಪಣೆ ನಡೆಯಿತು ಸಹಸ್ರಾರು ಭಕ್ತರು ದೇವರ ಅನ್ನಪ್ರಸಾದ ಸ್ವೀಕರಿಸಿ ಪುನಿತರಾದರು.ಶಾಸಕ ವೆಂಕಟಶಿವಾರೆಡ್ದಿ,ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ರಥೋತ್ಸವದಲ್ಲಿ ಭಾಗವಹಿಸಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಗೆ ಪೂಜೆ ಸಲ್ಲಿಸಿದರು. ಬ್ರಹ್ಮ ರಥೋತ್ಸವದ ಹಿಂದಿನ ದಿನ ದೇವಾಲಯದ ಸಭಾ ಭವನದಲ್ಲಿ ಅದ್ದೂರಿ ಕಲ್ಯಾಣೋತ್ಸವ ಏರ್ಪಡಿಸಲಾಗಿತ್ತು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8