Author: Srinivas_Murthy

ಬೆಂಗಳೂರು:ದಶಕಗಳ ಕನಸಾಗಿದ್ದ ಗ್ರಾಮೀಣ ಬಸ್ ಪಾಸ್ ಸೌಲಭ್ಯವನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಅಭಿನಂದನೆ ಸಲ್ಲಿಸಿತು.ಈ ಸಂದರ್ಭದಲ್ಲಿ ಮಾತನಾಡಿದ‌ ಮುಖ್ಯಮಂತ್ರಿ ಬಸ್ ಪಾಸ್ ಬಗ್ಗೆ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮಾತು ಕೊಟ್ಟಿದ್ದೆ. ಅದರಂತೆ ನಿಮ್ಮ ಬೇಡಿಕೆ ಈಡೇರಿಸಿ ಜಾರಿಗೆ ನೀಡಿದ್ದೇನೆ. ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ರಾಜ್ಯ ಘಟಕದ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಟಿವಿ9 ರಾಜಕೀಯ ವಿಭಾಗ ಮುಖ್ಯಸ್ಥ ಪ್ರಮೋದ್ ಶಾಸ್ತ್ರಿ, ನ್ಯೂಸ್18 ರಾಜಕೀಯ ಬ್ಯೂರೋ ಮುಖ್ಯಸ್ಥ ಚಿದಾನಂದ ಪಟೇಲಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕೆ.ವಿ.ಪ್ರಭಾಕರ್ ಗೆ ಸನ್ಮಾನಬಸ್ ಪಾಸ್ ಸೌಲಭ್ಯವನ್ನು ದೊರಕಿಸಿ ಕೊಡಲು ಸಹಕರಿಸಿದ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನೂ ಕೆಯುಡಬ್ಲೂಜೆ ಸನ್ಮಾನಿಸಿತು

Read More

ಬೆಂಗಳೂರು:ಬೆಂಗಳೂರು ನಗರದ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಲವು ದಿನಗಳಿಂದ ಸಾರ್ವಜನಿಕವಾಗಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.ಕೆಲ ದಿನಗಳ ಹಿಂದೆ ಚಿರತೆಯೊಂದು ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿಗೆ ಖ್ಯಾತಿ ಪಡೆದು ಹಲವಾರು ಸಾಫ್ಟ್‌ವೇರ್ ಸಂಸ್ಥೆಗಳು ಇರುವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಥಳೀಯರು ಹಾಗೂ ಟೆಕ್ಕಿಗಳು ಆತಂಕಕ್ಕೆ ಒಳಗಾಗಿದ್ದರು.ಚಿರತೆ ಓಡಾಟದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕ್ಯಾಮರಾಗಳನ್ನ ಅಳವಡಿಸಿ ಚಿರತೆ ಓಡಾಟದ ಬಗ್ಗೆ ನಿಗಾ ವಹಿಸಿದ್ದರು.ಕ್ಯಾಮೆರಾದಲ್ಲಿ ಹಲವು ಕಡೆಗಳಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು ಅದರ ಜಾಡು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೋನ್ ಗಳನ್ನ ಇಟ್ಟು ಸೆರೆಗೆ ಕಾರ್ಯಾಚರಣೆ ನಡೆಸಿದ್ದರು. ಎಲೆಕ್ಟ್ರಾನಿಕ್ ಸಿಟಿಯ ಎಲಿಪ್ಯಾಡ್ ಜಾಗದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದ ಚಿರತೆ, ಅಲ್ಲಿ ನಿರ್ಜನ ಪ್ರದೇಶದಲ್ಲಿಯೇ ಹೆಚ್ಚಾಗಿ ಬಿಡುಬಿಟ್ಟಿರುವುದು ಖಚಿತವಾಗಿ ಎಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.ಬೋನಿಗೆ ಬಿದ್ದಿರುವ ಚಿರತೆಗೆ ಐದು ವರ್ಷದ…

Read More

ನ್ಯೂಜ್ ಡೆಸ್ಕ್:ತಿರುಪತಿ-ತಿರುಮಲ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿ ಕೊಬ್ಬು ಇರುವ ಬಗ್ಗೆ ವಿವಾದ ದೇಶಾದ್ಯಂತ ಜೀವಂತವಾಗಿರುವಾಗಲೆ ತಮಿಳುನಾಡಿನ ಪ್ರಖ್ಯಾತ ಪಳನಿ ಮುರುಗನ್(ಸುಬ್ರಮಣ್ಯ) ದೇವಾಲಯ ಪ್ರಸಾದಲ್ಲಿ ಕಲಬೆರಕೆಯಾಗಿದೆ ಎಂದು ಖ್ಯಾತ ತಮಿಳು ಚಿತ್ರ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಆರೋಪಿಸಿದ್ದು, ಈ ಸಂಬಂಧ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಪ್ರಸಾದದಲ್ಲಿ ಮಕ್ಕಳಾಗದೇ ಇರುವ ಔಷದಿ ಮಿಶ್ರಣ!ಬಕಾಸುರನ್,ದ್ರೌಪದಿ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿ ಪಳನಿ ದೇವಾಲಯದಲ್ಲಿ ನೀಡಲಾಗುವ ಪಂಚಾಮೃತ ಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರು, ಅಲ್ಲಿ ಕೆಲಸ ಮಾಡುವ ನನಗೆ ಗೊತ್ತಿರುವವರೇ ಇದನ್ನು ನನಗೆ ಹೇಳಿದ್ದರು. ಇದರ ಬಗ್ಗೆ ದೇವಾಲಯವಾಗಲಿ, ಸರ್ಕಾರವಾಗಲಿ ಅಧಿಕೃತ ಹೇಳಿಕೆ ನೀಡಿಲ್ಲ, ಆದರೆ ಅಲ್ಲಿ ಕೆಲಸ ಮಾಡುತ್ತಿದ್ದವರೇ ಹೇಳಿಕೊಂಡಿರುವ ವಿಷಯ ಇದು ಎಂದು ಹೇಳಿದ್ದರು ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ತೀವ್ರಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದು, ಇದರಿಂದ ಎಚ್ಚೆತ್ತ ತಿರುಚ್ಚಿ ಪೊಲೀಸರು…

Read More

ನ್ಯೂಜ್ ಡೆಸ್ಕ್:ದೇವರು ಇದ್ದಾನೆ ಎಂಬುದಕ್ಕೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ.ಆರು ವರ್ಷದ ಬಾಲಕಿಯನ್ನು ಅತ್ಯಾಚಾರಿಯಿಂದ ಕೋತಿಗಳ ಗುಂಪು ರಕ್ಷಿಸಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಪಾಳುಬಿದ್ದ ಮನೆಯೊಳಗೆ ಎಳೆದೊಯಿದು ಇನ್ನೇನು ಬಾಲಕೀಯ ಮೇಲೆ ದುರುಳ ದಾಳಿಮಾಡಬೇಕು ಎನ್ನುವ ಸಮಯದಲ್ಲಿ ಕೋತಿಗಳ ಗುಂಪು ಬಂದು ಅವನನ್ನು ಅಲ್ಲಿಂದ ಓಡಿಸಿವೆ ಹೀಗಾಗಿ ಬಾಲಕಿಯನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು,ದುಷ್ಕರ್ಮಿ ಬಾಲಕೀಯನ್ನು ಕರೆದೊಯುತ್ತಿರುವ ದೃಶ್ಯಾವಳಿ ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿದ್ದು ದುರುಳನನ್ನು ಗುರುತಿಸಬೇಕಿದೆ. ಅಲ್ಲದೇ ನನ್ನ ಮಗುವನ್ನು ಸಾಯಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕೀಯ ತಂದೆ ಹೇಳಿಕೊಂಡಿದ್ದಾರೆ.

Read More

ಶಾಂತಿ,ವಾಸ್ತು ಹೋಮ ಮಾಡಿದ ಅರ್ಚಕರು ಪಂಚಗವ್ಯದಿಂದ ಅನ್ನ ಪ್ರಸಾದ,ಲಡ್ಡು ತಯಾರಿಕಾ ಗೋದಾಮಿನಲ್ಲಿ ಸಂಪ್ರೋಕ್ಷಣೆ ಬಳಿಕ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ ನ್ಯೂಜ್ ಡೆಸ್ಕ್:ಕಲಬೆರಕೆ ತುಪ್ಪ ಬಳಸಿ ತಿರುಮಲ ಶ್ರೀನಿವಾಸನ ದೇವಸ್ಥಾನದಲ್ಲಿ ಲಡ್ಡು ತಯಾರಿಗೆ ಮಾಡಿದ್ದು ದೇವಾಲಯದ ಪಾವಿತ್ರತೆಗೆ ಧಕ್ಕೆಯಾಗಿದೆ ಎಂಬ ಹಿನ್ನಲೆಯಲ್ಲಿ ಶ್ರೀನಿವಾಸನ ದೇವಸ್ಥಾನದ್ದಲ್ಲಿ ಸೋಮವಾರ ಶುದ್ಧೀಕರಣ ಕಾರ್ಯದ ಅಂಗವಾಗಿ ಮಹಾಶಾಂತಿ ಯಾಗ ಮುಕ್ತಾಯಗೊಂಡಿದೆ. ಪೂರ್ಣಾಹುತಿಯೊಂದಿಗೆ ಹೋಮವು ಶಾಸ್ತ್ರೋಕ್ತವಾಗಿ ಪೂರ್ಣಗೊಂಡಿದ್ದು ಸೋಮವಾರ ಶ್ರೀನಿವಾಸ ದೇವರಿಗೆ ರೋಹಿಣಿ ನಕ್ಷತ್ರದ ಮುಹೂರ್ತ ಪ್ರಬಲವಾಗಿದ್ದ ಕಾರಣ ಬೆಳಗ್ಗೆ 6ರಿಂದ ಆಗಮ ಪಂಡಿತರು ಹಾಗೂ ಅರ್ಚಕರು ದೇವಾಲಯದ ಯಾಗಶಾಲೆಯಲ್ಲಿ (ವಾಸ್ತು, ಸಭ್ಯಂ,ಪೌಂಡರೀಕ) ಮೂರು ಹೋಮಕುಂಡಗಳನ್ನು ಸ್ಥಾಪಿಸಿ ಹೋಮ ನೆರವೇರಿಸಿದರು. ಮೊದಲಿಗೆ ಮಹಾಶಾಂತಿ ಯಾಗ ಮತ್ತು ವಾಸ್ತು ಹೋಮ ನಡೆಸಲಾಯಿತು.ಆಗಮ ಪಂಡಿತರು ಭಗವಂತನಿಗಾಗಿ ನಡೆಯುತ್ತಿರುವ ಕಾರ್ಯಗಳಿಂದ ದೇವರ ದರ್ಶನಕ್ಕೆ ಬರುವಂತ ಸಾಮನ್ಯ ಭಕುತರಿಗೆ ತೊಂದರೆಯಾಗದಂತೆ ಒಂದು ದಿನದಲ್ಲಿ ಯಾಗ ಮಾಡಲು ನಿರ್ಧರಿಸಿ ಮಹಾ ಶಾಂತಿ ಯಾಗ ಮುಗಿಸಿದ್ದಾರೆ.ಹೋಮದ ನಂತರದಲ್ಲಿ ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ತಯಾರಿಸಿದ…

Read More

ನ್ಯೂಜ್ ಡೆಸ್ಕ್: ನಾಲ್ಕು ದಶಕಗಳಿಗಿಂತಲೂ ಹೆಚ್ಚುಕಾಲದಿಂದ ಭಾರತದ ಸಿನಿಮಾ ಪ್ರೇಮಿಗಳನ್ನು ತಮ್ಮ ನೃತ್ಯ,ಫೈಟ್ಸ್, ಡೈಲಾಗ್ಸ್ ಮೂಲಕ ರಂಜಿಸುತ್ತ ಕೋಟಿಗಟ್ಟಲೆ ಅಭಿಮಾನಿಗಳನ್ನು ಗಳಿಸಿರುವ ಮೆಗಾಸ್ಟಾರ್ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಚಿರಂಜೀವಿ ಅವರ ಸಿನಿಮಾ ಪ್ರಯಾಣಕ್ಕೆ ಮತ್ತೊಂದು ಅಪರೂಪದ ಗೌರವ ಲಭಿಸಿದೆ.ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದಿದ್ದಾರೆ,ಮೆಗಾಸ್ಟಾರ್ ಚಿರಂಜೀವಿ ತಮ್ಮ 45 ವರ್ಷಗಳ ವೃತ್ತಿ ಜೀವನದಲ್ಲಿ ಇದುವರೆಗೆ 156 ಚಿತ್ರಗಳನ್ನು ಮಾಡಿದ್ದಾರೆ. 537 ಹಾಡುಗಳಿಗೆ 24 ಸಾವಿರ ಹೆಜ್ಜೆ ಹಾಕಿ ಭಾರತದಲ್ಲಿಯೇ ಯಶಸ್ವಿ ಸ್ಟಾರ್ ನಟನಾಗಿರುವ ಚಿರಂಜಿವಿ ಅವರಿಗೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನನ ಪ್ರತಿನಿಧಿಗಳು ಮತ್ತು ಬಾಲಿವುಡ್ ನಟ ಅಮಿರ್ ಖಾನ್ ಜೊತೆಗೂಡಿ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.ಈ ಸಮಾರಂಭದಲ್ಲಿ ನಿರ್ಮಾಪಕರಾದ ಅಲ್ಲು ಅರವಿಂದ್, ಸುರೇಶ್ ಬಾಬು, ಜೆಮಿನಿ ಕಿರಣ್, ಮೈತ್ರಿ ರವಿಶಂಕರ್, ತಮ್ಮಾರೆಡ್ಡಿ ಭಾರದ್ವಾಜ, ಕೆಎಸ್ ರಾಮರಾವ್, ನಿರ್ದೇಶಕ ರಾಘವೇಂದ್ರರಾವ್, ಬಾಬಿ, ಗುಣಶೇಖರ್, ಬಿ ಗೋಪಾಲ್, ಕೋದಂಡರಾಮಿ ರೆಡ್ಡಿ ಮುಂತಾದವರು ಭಾಗವಹಿಸಿದ್ದರು. 1978 ರಲ್ಲಿ ಮೆಗಾಸ್ಟಾರ್ ಚಿರಂಜಿವಿ…

Read More

ಬೆಂಗಳೂರು:ತಿರುಮಲ ಪ್ರಸಾದ ತಯಾರಿಕೆಯಲ್ಲಿ ಕಲಬೆರಕೆ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ, ದೀಪ, ಅನ್ನ ಪ್ರಸಾದಕ್ಕೆ ನಂದಿನಿ ತುಪ್ಪವನ್ನೇ ಬಳಸಬೇಕು ಎಂದು ಆದೇಶ ಹೋರಡಿಸಿದೆ ಈ ಸಂಬಂಧ ಆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Read More

ಮಳಿಗೆ ಹಂಚಿಕೆಯಲ್ಲಿ ಅಕ್ರಮ ಇತರೆ ಸಮುದಾಯದವರಿಗೆ ಕೊಟ್ಟು ಪರಿಶಿಷ್ಟ ವ್ಯಾಪಾರಸ್ಥನಿಗೆ ನೀಡದೆ ಸೊಸೈಟಿ ಮಂಡಳಿ ಅನ್ಯಾಯ ಶ್ರೀನಿವಾಸಪುರ:ತಾಲೂಕಿನ ಗೌನಿಪಲ್ಲಿ ದೊಡ್ಡಪ್ರಮಾಣದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ(ಗೌವನಪಲ್ಲಿ ಸೊಸೈಟಿ) ವತಿಯಿಂದ ಗೌವನಪಲ್ಲಿಯಲ್ಲಿ ಮಳಿಗೆಗಳನ್ನು ನಿರ್ಮಾಣಮಾಡಲಾಗಿದೆ ಉಳಿದ ಜಾಗದಲ್ಲಿ ತಗಡಿನ ಒಪ್ಪಾರ ಹಾಕಿ ಬಿದಿ ಬದಿ ವ್ಯಾಪರಸ್ಥರಿಗೆ ನೀಡಲು ಉದ್ದೇಶಿಸಿರುವ ಸೋಸೈಟಿ ಆಡಳಿತ ಮಂಡಳಿ ಒಪ್ಪಾರದ ಜಾಗವನ್ನು ಪಾರದರ್ಶಕತೆ ಇಲ್ಲದೆ ಒಳಗೊಳಗೆ ವ್ಯವಹಾರ ನಡೆಸಿ ತಮಗೆ ಬೇಕಿರುವರಿಗೆ ಒಪ್ಪಾರದ ಮಳಿಗೆಗಳ ಹಂಚಿಕೆ ಮಾಡಲಾಗುತ್ತಿದ್ದು ಅಲ್ಲೆ ಹೂವಿನ ವ್ಯಾಪರ ಮಾಡುತ್ತಿರುವ ಪರಿಶಿಷ್ಟ ಜಾತಿಯ ವೆಂಕಟೇಶ್ ಅವರು ಅನ್ಯಾಯವಾಗಿದೆ ಎಂದು ಸೋಸೈಟಿ ಆಡಳಿತ ಮಂಡಳಿ ವಿರುದ್ದ ಆರೋಪ ಮಾಡಿದ್ದಾರೆ.ಈ ಕುರಿತು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು ನಾನು ಮೂಲತಃ ಗೌನಿಪಲ್ಲಿ ಗ್ರಾಮದ ನಿವಾಸಿಯಾಗಿದ್ದು, ಕಳೆದ 25 ವರ್ಷಗಳಿಂದ ಸೋಸೈಟಿ ಕಟ್ಟಡಕ್ಕೆ ಹೊಂದಿಕೊಂಡು ತೆಂಗಿನ ಗರಿಗಳ ಒಪ್ಪಾರ ಹಾಕಿಕೊಂಡು ಹೂವಿನ ಅಂಗಡಿ ನಡೆಸುತ್ತ ಜೀವನ ಮಾಡುತ್ತಿರುವೆ 4 ತಿಂಗಳ ಹಿಂದೆ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಹೂವಿನ ಅಂಗಡಿ ಸುಟ್ಟು…

Read More

ನ್ಯೂಜ್ ಡೆಸ್ಕ್:ಆಂಧ್ರದಲ್ಲಿ ವೈಎಸ್ಆರ್ ಆಡಳಿಲಾವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ರಾಜ್ಯ ಆಂಧ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ.ಹಿಂದುಗಳ ಪರಮ ಪವಿತ್ರ ಪುಣ್ಯಕ್ಷೇತ್ರವಾದ ತಿರುಮಲ ಶ್ರೀ ವೆಂಕಟೇಶ್ವರನ ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಮೀನಿನ ಎಣ್ಣೆ, ಹಂದಿಮಾಂಸದ ಕೊಬ್ಬು ಮತ್ತು ಗೋಮಾಂಸ ಕೊಬ್ಬು) ಮಿಶ್ರಣದ ತುಪ್ಪ ಬಳಕೆಯಾಗಿರುವ ಬಗ್ಗೆ ಸಂಶೋಧನ ವರದಿಗಳಿಂದ ನಾವೆಲ್ಲರೂ ತೀವ್ರವಾಗಿ ವಿಚಲಿತರಾಗಿದ್ದೇವೆ. ವೈಸಿಪಿ ಜಗನ್ ಸರ್ಕಾರ ರಚಿಸಿದ ಟಿಟಿಡಿ ಮಂಡಳಿಯು ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ಸಾಧ್ಯವಾದಷ್ಟು ಕಠಿಣ ಕ್ರಮ ತೆಗೆದುಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ, ಇದು ದೇವಾಲಯಗಳ ಅಪವಿತ್ರಗೊಳಿಸುವಿಕೆ, ಅದರ ಭೂ ಸಮಸ್ಯೆಗಳು ಮತ್ತು ಇತರ ಧಾರ್ಮಿಕ ಆಚರಣೆಗಳ ಸುತ್ತಲಿನ ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಅವರು ಹೇಳಿದರು.ಅವರ ಪ್ರಕಾರ, ಭಾರತದಾದ್ಯಂತ ದೇವಾಲಯಗಳಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಲು ರಾಷ್ಟ್ರೀಯ ಮಟ್ಟದಲ್ಲಿ ಸನಾತನ ಧರ್ಮ…

Read More

ಶ್ರೀನಿವಾಸಪುರ : ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಶ್ರೀನಿವಾಸಪುರ ತಾಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ವಿದ್ಯಾರ್ಥಿಗಳಿಗೆ ಕರೆ ಇತ್ತಿದ್ದಾರೆ.2024-25 ನೇ ಸಾಲಿನಲ್ಲಿ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯುವ ಸಲುವಾಗಿ ದಿನಾಂಕ: 01.09.2024 ರಿಂದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಅವರನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಸಮಾಜ ಕಲಾಣ ಇಲಾಖೆಯಿಂದ ಮೆಟ್ರಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಹಾಗೂ ಪ್ರೋತ್ಸಾಹಧನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.ವಿದ್ಯಾರ್ಥಿವೇತನವನ್ನು ಅರ್ಹ ಫಲಾನುಭವಿಗಳಿಗೆ ಇ-ಆಡಳಿತ ಕೇಂದ್ರದವರು ರೂಪಿಸಿ ಸಿದ್ಧಪಡಿಸಿರುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಮಂಜೂರು ಮಾಡಲಾಗುತ್ತಿದೆ. ಸದರಿ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ ವರ್ಷದಿಂದ ವರ್ಷಕ್ಕೆ ಫಲಾನುಭವಿಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಅದರಲ್ಲೂ ಮುಖ್ಯವಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕುಸಿತ ಕಾಣುತ್ತಿದೆೀ ಕಾರಣದಿಂದ ಸದರಿ ಕಾರ್ಯಕ್ರಮಗಳ ಬಗ್ಗೆ ಫಲಾನುಭವಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಆಯೋಜಿಸಿರುವುದಾಗಿ…

Read More