Author: Srinivas_Murthy

ಶ್ರೀನಿವಾಸಪುರ:ಸ್ತ್ರೀಯರ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಸಾಧನೆಗಳನ್ನು ಹಾಗು ಸಮಾಜಕ್ಕೆ ಅವರು ನೀಡಿರುವ ಇತರೆ ಸಾಧಕ ಕೊಡುಗೆಗಳನ್ನು ಸಂಭ್ರಮಿಸುವ ದಿನವೆ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೋಲಾರ ಜಿಲ್ಲಾ ಸಂಯೋಜಕರಾದ ಮಂಜುಳಾ ಭೀಮರಾವ್ ಹೇಳಿದರು ಅವರು ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.ಹೆಣ್ಣುಮಕ್ಕಳಲ್ಲಿ ಅಗಾಧವಾದ ಶಕ್ತಿ ಸಾಧಿಸಬೇಕು ಎಂಬ ಚಲ ಇದೆ ಹಾಗೆ ಮಾತೃವಾತ್ಸಲ್ಯ ಸಮರ್ಪಣಾ ಮನೋಭಾವ ಇರುವ ಮಹಿಳೆ ಬಹುಮುಖಿಯಾಗಿ ಸಾಧಿಸಲು ನಿಂತರೆ ಯಾವುದೆ ತಾರತಮ್ಯ ಅಡ್ಡಿಯಾಗದು ಎಂದರು.ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞ ವೈದ್ಯೆ ಗೌಸಿಯಾಭಾನು ಮಾತನಾಡಿ ವಿದ್ಯಾರ್ಥಿನಿಯರು ವಿದ್ಯಾರ್ಥಿ ದೆಸೆಯಲ್ಲಿ ವೈಙ್ಞಾನಿಕವಾಗಿ ಸಮಾಜದ ವ್ಯವಸ್ಥೆಯ ಬಗ್ಗೆ ಅರಿಬೇಕಿದೆ ದಿನವು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರನ್ನು ಅಸಮಾನ್ಯ ಸಾಧನೆ ಮಾಡುತ್ತಿದ್ದು ತಮ್ಮ ತಮ್ಮ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡಲು ಶ್ರಮಿಸುತ್ತಿದ್ದಾಳೆ ಎಂದರು.ಮಹಿಳಾ ಸಾಧಕಿಯರ ಆದರ್ಶವನ್ನು ತಗೆದುಕೊಂಡು ವಿದ್ಯಾರ್ಥಿನಿಯರು…

Read More

ನ್ಯೂಜ್ ಡೆಸ್ಕ್(ಕ್ರೈಂ ಟೀಂ):ಶ್ರೀನಿವಾಸಪುರ ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಶ್ರೀನಿವಾಸಪುರ-ಕೋಲಾರ ರಸ್ತೆಯಲ್ಲಿನ ಮುದುವಾಡಿ ಬಳಿಯ ನಾಯಕರಹಳ್ಳಿ-ತೊಂಡಾಲದ ಖಾಸಗಿ ಜಮೀನಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಇಂದು ಪತ್ತೆಯಾಗಿದೆ.ಸುಟ್ಟು ಕರಕಲರಾಗಿರುವ ಮಹಿಳೆಯನ್ನು ಶೊಭಾ(30)ಎಂದು ಗುರುತಿಸಲಾಗಿ ಆಕೆ ಮುಳಬಾಗಿಲು ತಾಲೂಕಿನವರಾಗಿದ್ದು ಆಂಧ್ರದ ವ್ಯಕ್ತಿಗೆ ಮದುವೆ ಮಾಡಿಕೊಟ್ಟಿದ್ದು ನಂತರದಲ್ಲಿ ವಿವಾದವಾಗಿ ಆಕೆ ಮಕ್ಕಳೊಂದಿಗೆ ಶ್ರೀನಿವಾಸಪುರದ ವೆಂಕಟೇಶ್ವರ ಬಡಾವಣೆಯಲ್ಲಿ ವಾಸಿಸುತ್ತಿದ್ದರು ಜೀವನ ಪೋಷಣೆಗೆ ಪಟ್ಟಣದ ಪೊಸ್ಟ್ ಆಫಿಸ್ ಬಳಿ ಲಕ್ಷ್ಮೀ ಹರ್ಬಲ್ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು ಎನ್ನುತ್ತಾರೆ,ಈಕೆಯ ಸಾವಿನ ಹಿಂದೆ ಹಲವಾರು ಅನುಮಾನಗಳು ವ್ಯಕ್ತವಾಗಿದ್ದು ಮೃತ ಮಹಿಳೆ ಬಳಸುತ್ತಿದ್ದರು ಎನ್ನಲಾದ ಮೊಬೈಲ್ ಹಾಗು ದ್ವಿಚಕ್ರವಾಹನ ಶ್ರೀನಿವಾಸಪುರ ಪಟ್ಟಣಕ್ಕೆ ಹೊಂದಿಕೊಂಡಿರುವ ಅವಲಕುಪ್ಪ ಗ್ರಾಮದ ಹೊಲದಲ್ಲಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ಮಹಿಳೆಯನ್ನು ಅವಲಕುಪ್ಪದ ಬಳಿ ಹತ್ಯೆ ಮಾಡಿ ತೊಂಡಾಲದ ಬಳಿಯ ಜಮೀನಿಗೆ ಸಾಗಿಸಿ ಸುಟ್ಟುಹಾಕಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ, ಇದರ ಅದಾರದಂತೆ ಪ್ರಕರಣವನ್ನು ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ದಾಖಲು ಮಾಡಲಾಗಿದ್ದು ಈ ಸಂಬಂದ ಅನುಮಾನಸ್ಪದ ಮೇಲೆ ಶ್ರೀನಿವಾಸಪುರ ತಾಲೂಕಿನ ಚಿರುವನಹಳ್ಳಿಯ ರಮೇಶ್…

Read More

ನ್ಯೂಜ್ ಡೆಸ್ಕ್: ಕನ್ನಡದ ಡಾ.ರಾಜ್ ಅಣ್ಣಾವ್ರ ಮೊಮ್ಮಗ,ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಯ ಪುತ್ರ ಯುವ ರಾಜ್‌ಕುಮಾರ್‌ ನಟನೆಯ ಮೊದಲ ಸಿನಿಮಾ ‘ಯುವ’ ಬಗ್ಗೆ ಸಿನಿಪ್ರೇಮಿಗಳಿಗೆ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಯುವ ಸಿನಿಮಾದ ಟೈಟಲ್‌ ಟೀಸರ್‌ ಬಿಡುಗಡೆಯಾಗಿ ಸಿಕ್ಕಾಪಟ್ತೆ ವೈರಲ್‌ ಆಗಿದೆ,ಇದರಲ್ಲಿ ಯುವ ರಾಜ್‌ಕುಮಾರ್‌ ಅವರ ಮಾಸ್‌ ಲುಕ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಮೊದಲು ‘ಯುವ’ ಚಿತ್ರಕ್ಕೆ ತಮಿಳು, ಮಲಯಾಳಂನ ಖ್ಯಾತ ನಟಿಯರು ನಾಯಕಿಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಮಾತುಗಳು ಕೇಳಿಬರುತಿತ್ತು ಈ ಎಲ್ಲಾ ಸುದ್ದಿಗಳಿಗೆ ಬ್ರೇಕ್‌ ಹಾಕಲಾಗಿದೆ ಚಿತ್ರಕ್ಕೆ ಅಚ್ಚ ಕನ್ನಡತಿ, ‘ಕಾಂತಾರ’ ಚಲುವೆ ಸಪ್ತಮಿ ಗೌಡ, ನಾಯಕಿಯಾಗಿ ಆಯ್ಕೆಯಾಗಿದ್ದಾರೆ.ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ನ ಸಿನಿಮಾಕಾಂತಾರ ಸಿನಿಮಾದಲ್ಲಿ…..ಮುದ್ದಾದ ಮಾಯಾಂಗಿಮೌನದ ಸಾರಂಗಿಮೋಹಕ ಮದರಂಗಿಕನ್ನ ಹಾಕಿದೆ ಮುಂಗುರುಳ ಸೋಕಿ…. ಎಂದು ಯುವಕರ ಹೃದಯ ಗೆದ್ದಿದ ಸಿಂಗಾರ ಸಿರಿ ಅಂಗಾಲಿನಲೆ ಬಂಗಾರ ಅಗೆದ ಮಾಯೆಸಪ್ತಮಿ ಗೌಡ,ನಾಯಕಿಯಾಗಿರುವ ಬಗ್ಗೆ ಅಧಿಕೃತ ಆಯ್ಕೆಯನ್ನು ಚಿತ್ರತಂಡ ಸೋಮವಾರ ಅನೌನ್ಸ್‌ ಮಾಡಿದೆ. ‘ಪಾಪ್‌ ಕಾರ್ನ್‌ ಮಂಕಿ ಟೈಗರ್‌’ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶ ಮಾಡಿರುವ ನಟಿ…

Read More

ನ್ಯೂಜ್ ಡೆಸ್ಕ್: ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಹೊಸ ಸೋಂಕಿನ ಆರ್ಭಟ ಆರಂಬವಾಗಿದೆ. ಕೋವಿಡ್ ಯುಗ ಮುಕ್ತಾಯವಾಯ್ತು ಎಂದು ನಿಟ್ಟುಸಿರುಬಿಡುವ ಹೊತ್ತಿನಲ್ಲಿ H3N2 ಇನ್‌ಫ್ಲುಯೆಂಜಾ ಹಾವಳಿ ಶುರುವಾಗಿದೆ. ಕಳೆದ ಒಂದು ತಿಂಗಳಿಂದ ದೇಶಾದ್ಯಂತ ಸಾವಿರಾರು H3N2 ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲೂ ಸುಮಾರು 26 ಪ್ರಕರಣಗಳು ದಾಖಲಾಗಿವೆ. ಹಾಗಾದ್ರೆ ಏನಿದು H3N2? ಎನ್ನುವ ಪ್ರಶ್ನೆ ಜನರನ್ನು ಕಾಡುತ್ತಿದೆ ಈ ಹಿಂದೆ ದೇಶಾದ್ಯಂತ ಕಾಡಿದ್ದ H1N1 ವೈರಾಣುವಿನ ರೀತಿಯಲ್ಲೇ ರೂಪಾಂತರಿ ಸೋಂಕು ಆಗಿರಬಹುದಾ? ಈ ಕುರಿತ ಸಮಗ್ರ ವಿವರ ಇಲ್ಲಿದೆ.ಏನಿದು H3N2 ಸೋಂಕು?ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಹೇಳುವಂತೆ ಜ್ವರಕ್ಕೆ ಕಾರಣವಾಗುವಂತ ವೈರಾಣು.ಈ ವೈರಾಣುವಿನ ಒಂದು ಉಪ ರೂಪಾಂತರಿ ಅಪಾಯಕಾರಿಯಾಗಿದ್ದು, ರೋಗಿಯು ಆಸ್ಪತ್ರೆಗೆ ದಾಖಲಾಗಬೇಕಾದ ಪರಿಸ್ಥಿತಿ ನಿರ್ಮಾಣ ಆಗುತ್ತೆ.ಐಸಿಎಂಆರ್ ಪ್ರಕಾರ ಆಸ್ಪತ್ರೆಗೆ ದಾಖಲಾಗುವ ಪ್ರತಿ ನೂರು H3N2 ರೋಗಿಗಳ ಪೈಕಿ ಶೇ. 92 ಮಂದಿಗೆ ಜ್ವರ ಇರುತ್ತೆ. ಶೇ. 86ರಷ್ಟು ಮಂದಿಗೆ ಕಫದ ಸಮಸ್ಯೆ ಬರುತತದೆ ಶೇ. 27ರಷ್ಟು ಮಂದಿಗೆ ಉಸಿರಾಟದ ಸಮಸ್ಯೆ…

Read More

ನ್ಯೂಜ್ ಡೆಸ್ಕ್: ಬೆಂಗಳುರು ನಗರದ ಕೆಆರ್​ಪುರಂ ನಿಂದ ವೈಟ್​ಫೀಲ್ಡ್​​ ಮಧ್ಯೆ ಸಂಚರಿಸಲಿರುವ ನಮ್ಮ ಮೆಟ್ರೋ ಸುರಕ್ಷಿತವಾಗಿ ಸಂಚರಿಸಲು ಯೋಗ್ಯವಾಗಿದೆ ಎಂದು ಸಿಎಂಆರ್​ಎಸ್​ ಧೃಡಿಕರಿಸಿದೆ ಎಂದು ಬಿಎಂಆರ್​​ಸಿಎಲ್​ ಹೇಳಿಕೆ ನೀಡಿದೆ.ಕೆಆರ್​ಪುರಂ ಮತ್ತು ವೈಟ್​ಫೀಲ್ಡ್ ನಡುವಿನ ರಸ್ತೆ ಮಾರ್ಗದ ಓಡಾಟ ಸದಾ ಟ್ರಾಫಿಕ್​ ಬಿಝಿಯಾಗಿರುತ್ತದೆ. ಒಮ್ಮೆ ಈ ಮಾರ್ಗದಲ್ಲಿ ಹೋದವರು ಮತ್ತೆ ಆ ಮಾರ್ಗದಲ್ಲಿ ವಾಪಸ್ಸು ಬರಲು ಸಾಕಪ್ಪ ಸಾಕು ಎನ್ನುತ್ತಾರೆ ವಿಶೇಷವಾಗಿ ಕೋಲಾರ-ಚಿಂತಾಮಣಿ ಭಾಗದ ಜನರು ಕೊಂಚ ಹೆಚ್ಚು ಒಡಾಡುವ ಈ ಮಾರ್ಗದಲ್ಲಿ ಮೆಟ್ರೋ ರೈಲು ಒಡಾಡಲು ಎಲ್ಲವೂ ಸಿದ್ದಮಾಡಿಕೊಳ್ಳಲಾಗಿದೆ ಜನರ ಒಡಾಟ ಪ್ರಾರಂಭವಾಗ ಬೇಕು ಅಷ್ಟೆ.ಈ ಮೆಟ್ರೋ ಲೈನ್​ ಸುರಕ್ಷಿತವಾಗಿ ಸಂಚರಿಸಲು ಯೋಗ್ಯವಾಗಿದೆ ಎಂದು ಮೆಟ್ರೋ ರೈಲ್​ ಸೇಫ್ಟಿ ಸಂಸ್ಥೆ (CMRS​) ಧೃಡಪಡಿಸಿದೆ ಎಂದು ಬೆಂಗಳೂರು ಮೆಟ್ರೋ ರೇಲ್​ ಕಾರ್ಪೋರೇಶನ್ (BMRCL)​ ಹೇಳಿದೆ. ರೈಲು ಸಂಚಾರಕ್ಕೆ ಚಾಲನೆ ನೀಡಲು ದಿನಾಂಕ ನಿಗದಿಯಾಗಬೇಕು ಅಷ್ಟೆ ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.ಈ ಬಗ್ಗೆ ಸಿಎಂಆರ್​ಎಸ್​ ಅಭಯ ಕುಮಾರ್​ ರೈ ಅವರು ಮಾಹಿತಿ ನೀಡಿ ಕೆಆರ್​ ಪುರಂ-ವೈಟ್​ಫೀಲ್ಡ್…

Read More

ನ್ಯೂಜ್ ಡೆಸ್ಕ್:ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಘಟ್ಟವಾಗಿರುತ್ತದೆ, ಅಂತಹ ಅದ್ಭುತಕ್ಕೆ ಸಾಕ್ಷಿಕರಿಸಲು ಮದುವೆ ಸಮಾರಂಭಕ್ಕೆ ಬಂಧುಗಳನ್ನು,ಆತ್ಮೀಯರನ್ನು,ಸ್ನೇಹಿತರು ಹೀಗೆ ಯಾರೆನೆಲ್ಲ ಕರೆಯಲು ಅವಕಾಶ ಇರುತ್ತದೋ ಅವರನ್ನು ಕರೆಯುವುದು ಸಾಮನ್ಯಇನ್ನು ಮದುವೆಯ ಆಮಂತ್ರಣ ನೀಡಲು ಬೈಕ್ ಕಾರ್ ಬಸ್ಸು ಊರಲ್ಲಾದರೆ ನಡೆದಾಡಿಕೊಂಡು ಹೋಗುವುದು ಸಾಮನ್ಯ ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಸಹೋದರನ ಮದುವೆ ಆಮಂತ್ರಣ ನೀಡಲು ಹೆಲಿಕಾಪ್ಟರ್ ಬಳಸಿಕೊಂಡ ಕಥೆಯಿದು.ಮೊದಲೆಲ್ಲ ಕಾಲ್ನಡಿಗೆ ಬಂಡಿ, ಅಥಾವ ಸೈಕಲ್ ನಲ್ಲಿ ಹೋಗುತ್ತಿದ್ದರು ಬದಲಾದ ಕಾಲಘಟ್ಟದಲ್ಲಿ,ಸಂಬಂಧಿಕರಿಗೆ ಪತ್ರಿಕೆಗಳನ್ನು ತಲುಪಿಸಲು ಬಸ್ಸು, ಸ್ವಂತ ದ್ವಿಚಕ್ರ ವಾಹನ ಕಾರು,ಬಾಡಿಗೆ ಕಾರು, ವಿವಿಧ ಸಾರಿಗೆ ಬಳಸಿಕೊಂಡು ಇನ್ನೂ ದೂರ ಇರುವಂತವರಿಗೆ ವಾಟ್ಸಾಪ್ ಮೂಲಕ ಕೊರಿಯರ್,ಅಂಚೆ ಮೂಲಕ ಮದುವೆ ಕಾರ್ಡ್ ಗಳನ್ನು ಕಳುಹಿಸುವುದು ಸಾಮನ್ಯ ಸಂಗತಿಯಾಗಿದೆ. ಆದರೆ ಹೈದರಾಬಾದ್ ಉದ್ಯಮಿಯೊಬ್ಬ ವಿನೂತನವಾಗಿ ಆಲೋಚಿಸುವ ಮೂಲಕ ಹೀಗೂ ಮದುವೆ ಆಮಂತ್ರಣದ ಪತ್ರಿಕೆ ನೀಡಬಹುದು ಎಂದು ಹೊಸ ಟ್ರೆಂಡ್ ಹುಟ್ಟುಹಾಕಿದ್ದಾನೆ. ತನ್ನ ಸಹೋದರನ ಮದುವೆ ಪತ್ರಿಕೆಗಳನ್ನು ಹಂಚಲು ಹೆಲಿಕಾಪ್ಟರ್ ಬುಕ್ ಮಾಡಿ ಅದರಲ್ಲಿ ತೆರಳಿ ಬಂಧು ಮಿತ್ರರಿಗೆ…

Read More

ಶ್ರೀನಿವಾಸಪುರ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತಮಟೆ ಕಲಾವಿದ ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರನ್ನು ಸೋಮವಾರ ಪಟ್ಟಣದಲ್ಲಿ ಅದ್ದೂರಿಯಾಗಿ ಸನ್ಮಾನಿಸಲು ಸಮಾನ ಮನಸ್ಕರ ಸಾಂಸ್ಕೃತಿಕ ವೇದಿಕೆ ಸಜ್ಜಾಗಿದೆ ಸೋಮವಾರ ತಾಲೂಕು ಕಛೇರಿಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿರುವುದಾಗಿ ದಲಿತ ಮುಖಂಡರು ತಿಳಿಸಿದರು.ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಸಮಾನ ಮನಸ್ಕರ ಸಾಂಸ್ಕೃತಿಕ ವೇದಿಕೆ ವತಿಯಿಂದ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸನ್ ಮಾತನಾಡಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರನ್ನು ಕೇಂದ್ರ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕೆ ಹೆಮ್ಮೆಯ ವಿಚಾರವಾಗಿದ್ದು ತಮ್ಮ ಬಾಲ್ಯದಿಂದಲೇ ತಮಟೆ ವಾದ್ಯ ಅಭ್ಯಾಸ ಮಾಡುತ್ತ ವಿಶೇಷ ಕೌಶಲ್ಯವನ್ನು ಪಡೆದು ನಮ್ಮ ರಾಜ್ಯ ದೇಶ ಅಲ್ಲದೆ ವಿದೇಶಗಳಿಗೆ ತೆರಳಿ ತಮಟೆ ವಾದ್ಯದ ಸದ್ದನ್ನು ಕೇಳಿಸಿದ್ದಾರೆ ಇಂತಹ ಮಹಾನ್ ಕಲಾವಿದ ತಾಲೂಕಿನ ಅಳಿಯರಾಗಿದ್ದು ಅವರನ್ನು ತಾಲ್ಲೂಕಿಗೆ ಕರೆತಂದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಗೌರವಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ತಾಲೂಕಿನ ಕಲಾವಿದರು,ಕವಿಗಳು,ಪ್ರಗತಿಪರ ಚಿಂತಕರು,ಸಾಹಿತಿಗಳು,ವಿದ್ಯಾರ್ಥಿಗಳು,ಶಿಕ್ಷಕರು, ಕಲಾಭಿಮಾನಿಗಳು, ಕನ್ನಡಪರ , ರೈತಪರ ಸಂಘಟನೆಗಳು, ಅಲ್ಪಸಂಖ್ಯಾತ ಹಾಗೂ ದಲಿತ…

Read More

ಶ್ರೀನಿವಾಸಪುರ:ಸಣ್ಣ ಪುಟ್ಟ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ ಎಂದುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರೈತರು ಇಂದು ಶ್ರೀನಿವಾಸಪುರದ ಅರಣ್ಯ ಇಲಾಖೆಯ ಕಚೇರಿ ಮುಂದೆ ಧರಣಿ ನಡೆಸಿ ಪ್ರತಿಭಟಿಸಿದರು. ಐವತ್ತು ಅರವತ್ತು ವರ್ಷಗಳ ಹಿಂದೆ ಖರೀದಿ ಮಾಡಿ ಸಾಗುವಳಿ ಮಾಡುತ್ತಿರುವ ಸಣ್ಣ ಪುಟ್ಟ ರೈತರ ಜಮೀನುಗಳನ್ನು ಪದೇ ಪದೇ ಸೆಟಲೈಟ್ ಸರ್ವೆ ನೆಪದಲ್ಲಿ ಗುರುತು ಹಾಕಿ ಅರ್ದ ಎಕರೆ ಮೂಕ್ಕಾಲು ಎಕರೆ ಬಿಡಬೇಕು ಎಂದು ತೊಂದರೆ ನೀಡುತ್ತಿದ್ದಾರೆ ಆರೋಪಿಸಿದರು.ದಶಕಗಳ ಹಿಂದೆಯೆ ಅರಣ್ಯ ಇಲಾಖೆ ತಮ್ಮ ಅರಣ್ಯ ಭೂಮಿಯನ್ನು ಗಡಿ ಗುರುತು ಮಾಡಿ ಕಲ್ಲು ನೆಟ್ಟಿದ್ದರು ಈಗ ಮತ್ತೆ ಹೊಸದಾಗಿ ಸೆಟಲೈಟ್ ಸರ್ವೆ ಹೆಸರಿನಲ್ಲಿ ಕಿರುಕಿಳ ನೀಡುತ್ತಿದ್ದಾರೆ ಎಂದು ದೂರಿದ ರೈತರು ಇತ್ತಿಚಿಗೆ ಕಾಡು ಪ್ರಾಣಿಗಳಿಂದ ಆಗುತ್ತಿರುವ ಉಳಪಟಗಳಿಂದ ರೈತರು ನಷ್ಟಕ್ಕೆ ಒಳಗಾಗಿರುವ ಬಗ್ಗೆ ಅರಣ್ಯ ಇಲಾಖೆಯವರು ಬೇಜವಾಬ್ದಾರಿತನ ತೊರುತ್ತಿದ್ದಾರೆ ಎಂದರು.ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯರೈತ ಸಂಘದ ಪ್ರತಿಭಟನೆ ಮಾಹಿತಿ ಇದ್ದರು ಅರಣ್ಯ ಇಲಾಖೆ…

Read More

ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕು ಕೇಂದ್ರಿಕೃತವಾಗಿ ವಿಭಜಿತ ಕೋಲಾರ ಜಿಲ್ಲೆಯಲ್ಲಿ ಮಾವಿನ ಕಂಪು ಸೂಸುತ್ತಿದೆ.ಮೈತುಂಬ ಹೂ ತುಂಬಿಕೊಂಡಿದ್ದು ಮಾವಿನ ಮರಗಳು ಪ್ರಾಕೃತಿಕವಾಗಿ ಸುಂದರವಾಗಿ ಕಾಣ ಸಿಗುತ್ತಿದೆ ಇದು ಮಾವು ಬೆಳೆದ ರೈತರ ಮನದಲ್ಲೂ ಸಂತಸ ತುಂಬಿದ್ದು ಭರ್ಜರಿ ಇಳುವರಿಯ ನಿರೀಕ್ಷೆಯಲ್ಲಿದ್ದಾರೆ.ಶ್ರೀನಿವಾಸಪುರ ಎಂದರೆ ಮಾವಿನ ಮಡಿಲು ಎಂದೇ ಖ್ಯಾತಿ, ಇಲ್ಲಿ ಬೆಳೆಯುವ ಮಾವು ದೇಶ ವಿದೇಶಗಳಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ಇಲ್ಲಿ ಬೆಳೆಯುವಂತ ಬಾದಾಮಿ,ರಾಜಗೀರಾ, ಬೇನಿಷಾ, ನೀಲಂ, ತೋತಾಪುರಿ, ಸೇಂದೂರಾ/ರಸಪೂರಿ ಇನ್ನು ಹಲವು ತಳಿಯ ಮಾವಿನ ಹಣ್ಣುಗಳು ದೇಶದಾಚೆ ವಿದೇಶಗಳಿಗೆ ರಫ್ತಾಗುತ್ತಿದೆ ಈ ಭಾಗದ ಜನರ ಜೀವನಾಡಿಯಾಗಿರುವ ಮಾವು ರೈತರ ಬದುಕು ಹಸನಾಗಿಸಿತ್ತು.ಭರ್ಜರಿ ಹೂ ಬಿಟ್ಟ ಮಾಮರಕೆಲವೊಂದು ಮರಗಳಲ್ಲಿ ಎಲೆಗಳೇ ಕಾಣದ ರೀತಿಯಲ್ಲಿ ಹೂ ಬಿಟ್ಟಿರುವ ಕಾರಣ ಮಾವು ಬೆಳೆಗಾರರ ನಿರೀಕ್ಷೆ ಹೆಚ್ಚಾಗಿದೆ. ಕಳೆದ ವರ್ಷ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಬಿದ್ದ ಮಳೆಯಿಂದ ಭೂಮಿ ತಂಪಾಗಿದೆ ಮಾವಿನ ಮರಗಳು ಫಲವತ್ತತೆ ಕಂಡಿರುವ ಹಿನ್ನಲೆಯಲ್ಲಿ ಮಾವಿನ ಮರ ಸೊಂಪಾಗಿ ಮೈತುಂಬ ಹೂ ಮುಡಿದು ನಿಂತಿವೆ. ವರ್ಷಕ್ಕೆ ಒಂದೇ…

Read More

ನ್ಯೂಜ್ ಡೆಸ್ಕ್:ಪುರುಷ ಧೋರಣೆಯ ಪ್ರಪಂಚದಲ್ಲಿ ನ್ಯಾಯವಾದಿಯೊಬ್ಬ ಜೀವನ ಸಂಗಾತಿಯನ್ನು ಹೊರಗಿನ ಪ್ರಪಂಚದಿಂದ ದೂರವಾಗಿ ಹೊರಗೆ ಕಳಿಸದೆ 14 ವರ್ಷ ಕಾಲ ಗೃಹ ಬಂಧನದಲ್ಲಿ ಇರಿಸುವ ಮೂಲಕ ನರಕಯಾತನೆ ತೊರಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.!14 ವರ್ಷ ದಾಂಪತ್ಯದಲ್ಲಿ ಗೃಹಣಿ ಸುಪ್ರಿಯಾಗೆ ಗಂಡನ ಮನೆ ಬಿಟ್ಟು ಬೇರೊಂದು ಪ್ರಪಂಚವೇ ಅರಿಯದ ಪರಿಸ್ಥಿತಿ ಕಥೆ ಕೇಳಿದವರು ಬೆಚ್ಚಿ ಬೀಳುವಂತಾಗಿದೆ.ಆಕೆಯನ್ನು ವಿವಾಹವಾಗಿರುವ ಶ್ಯಾಡಿಸ್ಟ ಗಂಡ ಆಂಧ್ರಪ್ರದೇಶದ ವಿಜಯನಗರದ ಗೋದಾವರಿ ಮಧುಸೂದನ್ ಎಂದು ಗುರುತಿಸಲಾಗಿದೆ.ಆಂಧ್ರದ ಪುಟ್ಟಪುರ್ತಿ ಮೂಲದ ಸಾಯಿ ಸುಪ್ರಿಯಾ ಎಂಬಾಕೆಯನ್ನು ಗೋದಾವರಿ ಮಧುಸೂದನ್ ಎಂಬ ವಕೀಲ 2008 ರಲ್ಲಿ ವಿವಾಹವಾಗಿದ್ದು ಅವರಿಗೆ ಇಬ್ಬರು ಮಕ್ಕಳಿದ್ದಾರೆ.ಮಧುಸೂದನ್ ಅವರ ತಾಯಿ ಗೋದಾವರಿ ಉಮಾಮಹೇಶ್ವರಿ ಮತ್ತು ಕಿರಿಯ ಸಹೋದರ ದುರ್ಗಾಪ್ರಸಾದ್ ಅವರೊಂದಿಗೆ ವಾಸಿಸುತ್ತಿದ್ದು,ಮದುವೆಯಾಗಿ ಮೂರು ವರ್ಷಗಳ ಚನ್ನಾಗಿಯೇ ಇದ್ದ ಮಧುಸೂದನ್-ಸುಪ್ರಿಯಾ ದಂಪತಿ ನಂತರದಲ್ಲಿ ಅತ್ತೆ ಮನೆಯವರ ಮಾನಸೀಕ ಕಿರುಕುಳ ನಿಂದನೆಯ ಮಾತುಗಳಿಂದ ಸುಪ್ರಿಯಾರವರನ್ನು ಮನೆಯಿಂದ ಹೊರಗೆ ಕಳುಹಿಸದೆ ಆಕೆಗೆ ಭಾಹ್ಯ ಪ್ರಪಂಚದ ಸಂಪರ್ಕವನ್ನು ಕಡಿತ ಗೊಳಿಸಿ ಮನೆಗೆ ಸೀಮಿತವಾಗಿಸಿದ ಮಧುಸೂದನ್…

Read More