Author: Srinivas_Murthy

ಶ್ರೀನಿವಾಸಪುರ: ಕೌಟಂಬಿಕ ಕಲಹದ ನ್ಯಾಯ ಪಂಚಾಯಿತಿಯಲ್ಲಿ ಮಾತನಾಡಿದ್ದ ವ್ಯಕ್ತಿ ಅನುಮಾನ್ಪದವಾಗಿ ಮೃತಪಟ್ಟಿರುತ್ತಾನೆ ಮೃತನ ಕಡೆಯವರು ಎದುರಾಳಿ ಮಾಡಿದ ಹಿನ್ನಲೆಯಲ್ಲಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಗೌವವಿಪಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯ ಕೋಡಿಪಲ್ಲಿ ಪಂಚಾಯಿತಿಯ ಕರಿಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ.ಮೃತ ವ್ಯಕ್ತಿಯನ್ನು ವೆಂಕಟರವಣಪ್ಪ (55) ಎಂದು ಗುರುತಿಸಲಾಗಿದೆ ಮೃತ ವ್ಯಕ್ತಿಯ ಮೊಮ್ಮಗಳ ಗಂಡ ಗಣೇಶನೆ ವೆಂಕಟರಮಣಪ್ಪನನ್ನು ಕೊಲೆಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.ಕೊಲೆ ವಿಷಯ ಹೊರಬಿಳುತ್ತಿದ್ದಂತೆ ಮೃತನ ಮನೆಯವರು ಮೊಮ್ಮಗಳ ಗಂಡ ಗಣೇಶನ ಸೋದರ ಮಾವ ಲಚ್ಚನ್ನನ ಮನೆಗೆ ಬೆಂಕಿ ಹಾಕಿದ್ದು ಮನೆ ಹಾಗು ಪೀಠೋಪಕರಣಗಳು ಹಾಗೂ ಬಟ್ಟೆಗಳು ಭಸ್ಮವಾಗಿದೆಮೃತನ ಮೊಮ್ಮಗಳಾದ ಶೋಬಾಳನ್ನು ಚಿಂತಾಮಣಿ ತಾಲೂಕಿನ ಬಟ್ಟಲಪಲ್ಲಿ ಮಾವುಕೆರೆ ಗ್ರಾಮದ ಗಣೇಶನಿಗೆ ಕೊಟ್ಟು ವಿವಾಹ ಮಾಡಲಾಗಿತ್ತು ದಾಂಪತ್ಯ ಜೀವನದ ಕುರಿತಾಗಿ ದಂಪತಿ ನಡುವಿನ ಜಗಳಕ್ಕೆ ಎರಡು ದಿನಗಳ ಹಿಂದಿನ ರಾತ್ರಿ ಗ್ರಾಮದಲ್ಲಿನ್ಯಾಯ ಪಂಚಾಯತಿ ಮಾಡಲಾಗಿದೆ ಈ ಸಂದರ್ಭದಲ್ಲಿ ಎರಡು ಕುಟುಂಬದವರ ನಡುವೆ ಮಾತಿಗೆ ಚಕಮಕಿ ನಡೆದಿರುತ್ತದೆ ಇದು ಗಲಾಟೆಗೆ ತಿರುಗಿದೆ ಇದರಿಂದ ಮೊಮ್ಮಗಳ ಗಂಡ ಗಣೇಶ್…

Read More