ಶ್ರೀನಿವಾಸಪುರ:ಶ್ರೀನಿವಾಸಪುರದ ಗ್ರಾಮ ದೇವತೆಯಂದು ಪೂಜಿಸುವ ಶ್ರೀಚೌಡೇಶ್ವರಿ ವರ್ಧಂತೋತ್ಸವ ಜಯಂತಿ ಕಾರ್ಯಕ್ರಮ ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಆಷಾಢದಲ್ಲಿ ಮಂಗಳಕರವಾದ ರೇವತಿ ನಕ್ಷತ್ರದಂದು ಚೌಡೇಶ್ವರಿ ವರ್ಧಂತಿಯನ್ನು ಆಚರಿಸಲಾಗುತ್ತದೆ.
ವರ್ಧಂತೋತ್ಸವ ಅಂಗವಾಗಿ ಚೌಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು ಬೆಳಿಗ್ಗೆ ಬ್ರಹ್ಮ ಮುಹೂರ್ತದ ಸಮಯದಲ್ಲಿ ಸುಪ್ರಭಾತ ಸೇವೆಯೊಂದಿಗೆ ಆರಂಭವಾದ ಪೂಜಾ ಕಾರ್ಯಕ್ರಮಗಳು ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ನಂತರ ಸಾಮೂಹಿಕ ಶ್ರೀಲಲಿತಾ ಸಹಸ್ರನಾಮ ಪಾರಯಣ. ಸಹಸ್ರನಾಮ ಕುಂಕುಮಾರ್ಚನೆ ಮಂತ್ರಪುಷ್ಪ, ಅಷ್ಟಾವಧ ಸೇವೆ ನಂತರ ಮತ್ತಿತರ ಧಾರ್ಮಿಕ ವಿಧಿವಿಧಾನಗಳ ಆಚರಣೆ ನಂತರ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾಧಿಗಳು
ವರ್ಧಂತೋತ್ಸವ ಅಂಗವಾಗಿ ಸಹಸ್ರ ಸಂಖ್ಯೆಯಲ್ಲಿ ಭಕ್ತಾಧಿಗಳು ಮುಂಜಾನೆಯಿಂದಲೆ ದೇವಾಲಯಕ್ಕೆ ಆಗಮಿಸಿ ಶ್ರೀಚೌಡೇಶ್ವರಿ ಅಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು.ರಾತ್ರಿ ಒಂಬತ್ತು ಗಂಟೆಯಾದರೂ ಆಗಮಿಸುತ್ತಿದ್ದ ಭಕ್ತರು.
ಕೊಳ್ಳೂರು ಬಡಾವಣೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲೂ ವರ್ಧಂತೋತ್ಸವ ಅಂಗವಾಗಿ ವಿಶೇಷ ಪೂಜೆ ದುರ್ಗಾ ಹೋಮ ಹವನ ನಡೆಸಿದ್ದು,ಭವ್ಯವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16