ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.
ಚಿಂತಾಮಣಿ ತಾಲೂಕಿನ ಕೆಂಚರ್ಲಾಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮಿಟ್ಟಹಳ್ಳಿ,ಅಪ್ಸಾನಹಳ್ಳಿ, ದೊಡ್ಡಹಳ್ಳಿ,ನಂದನಹಳ್ಳಿ, ಗೋನಿಪಲ್ಲಿ,ಅನಪಲ್ಲಿ,ರಾಸಪಲ್ಲಿ ಹಾಗು ಸುತ್ತುಮುತ್ತಲಿನ ಹಲವಾರು ಗ್ರಾಮಗಳಲ್ಲಿ ಭೂಮಿನಡುಗಿದ ಅನುಭವ ಆಗಿದೆ ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಜನರು ಹೊರಗೆ ಬಂದಿರುತ್ತಾರೆ.ಕೆಲವು ಗ್ರಾಮಗಳಲ್ಲಿ ದೊಡ್ಡ ಸದ್ದಿನ ಕಂಪನ ನಡೆದರೆ ಇನ್ನೂ ಕೆಲವು ಗ್ರಾಮಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಆದರೆ ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಭೂಮಿಯ ಕಂಪನದಿಂದ ಮನೆಯಲ್ಲಿನ ಪಾತ್ರೆಗಳು ಅಲ್ಲಾಡಿ ಕೆಳಗೆ ಬಿದ್ದಿದ್ದು ಜನತೆ ಆತಂಕ ಗೊಂಡಿರುತ್ತಾರೆ. ಮನೆಯಿಂದ ಹೊರ ಬಂದ ಜನತೆ ರಸ್ತೆಗಳಲ್ಲಿ ನಿಂತು ಇದು ನಿಜನಾ ಅಥಾವ ಕನಸ ಎಂದು ಆತಂಕದಿಂದ ಪರಸ್ಪರ ಮುಟ್ಟಿನೊಡಿಕೊಂಡು ಅನಿಭವ ಹೇಳಿಕೊಳ್ಳುತ್ತಿದ್ದಾರೆ.
ಮನೆ ಮಂದಿಯಲ್ಲ ಮನೆಯಿಂದ ಹೊರ ಬಂದಿದ್ದು ಈಗ ಮತ್ತೆ ಮನೆಯ ಒಳಗೆ ಹೋಗಲು ಜನತೆಗೆ ಧೈರ್ಯವೇ ಇಲ್ಲವಂತೆ ಹೀಗೆಂದು ನಡು ರಸ್ತೆಯಲ್ಲೇ ನಿಂತ ಗ್ರಾಮಸ್ಥರು ಬೆಡ್ ಶೀಟ್ ಹೊದ್ದಿಕೊಂಡು ಬಿಳುತ್ತಿರುವ ಮಂಜಿನಲ್ಲೆ ನಡುಗುತ್ತ ಹೇಳುತ್ತಾರೆ.
Breaking News
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
Wednesday, April 9