ಶ್ರೀನಿವಾಸಪುರ:- ತಾಲೂಕಿನ ಕೆಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಕೆಲಸ ಮಾಡಿಕೊಡದೆ ರೈತರನ್ನು ಕಚೇರಿಗಳಿಗೆ ಅಲೆದಾಡಿಸುತ್ತ ಹಣ ಪೀಕಲು ಸಬೂಬು ಹೇಳುತ್ತ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಉಪತಹಶೀಲ್ದಾರ್ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ವೀರಬದ್ರಸ್ವಾಮಿ ಮಾತನಾಡಿ ಕಂದಾಯ ಇಲಾಖೆ.ತೋಟಗಾರಿಕೆ ಇಲಾಖೆ,ಕೃಷಿ ಇಲಾಖೆ ತಾಲೂಕು ಪಂಚಾಯಿತಿ, ರೇಷ್ಮೇ ಇಲಾಖೆಗಳಲ್ಲಿ ರೈತರ ಮತ್ತು ಸಾರ್ವಜನಿಕರಿಗೆ ಸ್ಪಂದನೆ ಇಲ್ಲ ಸಣ್ಣ ಕೆಲಸವಾದರೂ ಕನಿಷ್ಟ ಎರಡು ಮೂರು ತಿಂಗಳುಗಳ ಕಾಲ ಕಚೇರಿಗಳಿಗೆ ಅಲೆದಾಡಿಸುತ್ತಾರೆ ಇಲ್ಲವಾದರೆ ಲಂಚ ಕೇಳುತ್ತಾರೆ ಇದರಿಂದ ತಾಲೂಕು ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ನೇರವಾಗಿ ಆರೋಪಿಸಿದರು.
ತಾಲೂಕು ಸಂಘದ ಅಧ್ಯಕ್ಷ ನಂಬಿಹಳ್ಳಿಶ್ರೀರಾಮರೆಡ್ಡಿ ಮಾತನಾಡಿ ಭೂದಾಖಲಾತಿ ಮತ್ತು ಸರ್ವೆ ಇಲಾಖೆಗಳಲ್ಲಿ ಅಧಿಕಾರಿಗಳು ದುಡ್ಡಿಗೆ ಪ್ರಾಮುಖ್ಯತೆ ಹೆಚ್ಚು ನೀಡುತ್ತಾರೆ ಎಂದ ಅವರು ತಾಲೂಕಿನ ಆಡಳಿತ ವ್ಯವಸ್ಥೆಯಲ್ಲಿನ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ ಪರಿಣಾಮ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸದಿದೆ ಈ ಬಗ್ಗೆ ಜಿಲ್ಲಾಧಿಕಾರಿಗಳು ತಾಲೂಕಿಗೆ ಖುದ್ದು ಭೇಟಿ ನೀಡಿ ಪರಶೀಲನೆ ಮಾಡಬೇಕು ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ದ ಕ್ರಮ ಜರಿಗಿಸುವಂತೆ ಮತ್ತು ರೈತರ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲು ಅನಕೂಲ ವಾತವರಣ ನಿರ್ಮಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘ ಜಿಲ್ಲಾಧ್ಯಕ್ಷ ರಾಮೇಗೌಡ, ಬೈರಾರೆಡ್ಡಿ, ಗಂಗಾಧರ್,ನರಸಿಂಹಯ್ಯ ಶ್ರೀಧರ್,ಅಸ್ಲಾಂ ಪಾಷ ರಾಮಕೃಷ್ಣ ಮುಂತಾದವರು ಇದ್ದರು
Breaking News
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
Monday, April 7