ಶ್ರೀನಿವಾಸಪುರ: ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ಹಿಂದುಳಿದ ಸಮಾಜಗಳು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಹೇಳಿದರು ಅವರು ಇಂದು ತಾಲೂಕಿನ ಯಲ್ದೂರು ಹೋಬಳಿ ಕೊಳತೂರು ಹಾಗು ಲಕ್ಷ್ಮಿಸಾಗರ ಪಂಚಾಯಿತಿಗಳಲ್ಲಿ ಜೆಡಿಎಸ್ ಅಭ್ಯರ್ಥಿ ವೆಂಕಟಶಿವಾರೆಡ್ದಿ ಪರ ಪ್ರಚಾರ ನಡೆಸಿ ಮಾತನಾಡಿದರು, ವೆಂಕಟಶಿವಾರೆಡ್ಡಿಯವರು ಶಾಸಕರಾಗಿದ್ದ ಅವಧಿಯಲ್ಲಿ ಎಲ್ಲಾ ಸಮಾಜಗಳಿಗೆ ನ್ಯಾಯೋಚಿತವಾದ ಸಾಮಜಿಕ ನ್ಯಾಯ ಒದಗಿಸಿದ್ದರು ಸರ್ಕಾರದ ಸೌಲಭ್ಯಗಳ ಹಂಚಿಕೆ ಸಂದರ್ಭದಲ್ಲೂ ಅರ್ಹ ಬಡ ಫಲಾನುಭವಿಗಳನ್ನು ಪಕ್ಷಾತೀತವಾಗಿ ಧರ್ಮಾತೀತವಾಗಿ ಗುರುತಿಸಿ ನ್ಯಾಯ ಒದಗಿಸಿದ್ದಾರೆ ಆದರೆ ಈಗ ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಜಿಕವಾಗಿ ಹಿಂದುಳಿದ ಸಮಾಜಗಳಿಗೆ ಅನ್ಯಾಯವಾಗಿದೆ ಎಂದು ದೂರಿದರು ವೆಂಕಟಶಿವಾರೆಡ್ಡಿ ಪರಿಶಿಷ್ಟ ಜಾತಿ ಜನಾಂಗ ಮತ್ತು ಹಿಂದುಳಿದ ವರ್ಗಗಳ ಹಿತಚಿಂತಕರಾಗಿದ್ದು ಅವರು ಮತ್ತೆ ಶಾಸಕರಾದರೆ ಹಿಂದುಳಿದ ಸಮಾಜಗಳಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದ್ದು ಶೋಷಿತ ಸಮಾಜಗಳಿಗೆ ನ್ಯಾಯ ಒದಗಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗೆ ಜೆಡಿಎಸ್ ಅಭ್ಯರ್ಥಿ ವೆಂಕಟಶಿವಾರೆಡ್ಡಿಯನ್ನು ಬೆಂಬಲಿಸುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಶೇಷಾಪುರ ಡಾ.ಗೋಪಾಲ್,ಸಹಕಾರಿ ಧುರಿಣ ಗೋವಿಂದಗೌಡ,ಮಂಜಲನಗರ ಮಂಜಲನಗರ ರಘುನಾಥ್,ಶೆಟ್ಟಿಹಳ್ಳಿ ಮಂಜು ಮುಂತಾದವರು ಇದ್ದರು
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8