ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.
ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಜಮೀರ್ ಇದೇ ವೇಳೆ ಟೀಕಿಸಿದರು.
Breaking News
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
- ಕೆಟ್ಟು ನಿಂತ ಬೆಂಗಳೂರು-ಕೋಲಾರ ಮೆಮೊ ರೈಲು ,ರಾತ್ರಿವೇಳೆ ಪರದಾಡಿದ ಪ್ರಯಾಣಿಕರು!
Wednesday, April 2