ಶ್ರೀನಿವಾಸಪುರ; ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆರು ಭಾರಿ ಶಾಸಕರಾಗಿ ಎರಡು ಭಾರಿ ಸ್ಪೀಕರ್ ಆಗಿ ಒಮ್ಮೆ ಸಚಿವರಾಗಿ ಸದಾ ಮೇಧಾವಿಯಂತೆ ಮಾತನಾಡುವ ರಾಜಕಾರಣಿ ಮಹಿಳೆಯರ ಕುರಿತಾಗಿ ಅವರಾಡಿರುವ ಮಾತು ಮಹಿಳೆಯರು ನೂವು ಉಣ್ಣುವಂತಾಗಿದೆ ಹಾಗೇ ತಾಲ್ಲೂಕಿನ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಆರೋಪಿಸಿದರು.
ಶ್ರೀನಿವಾಸಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಮೇಶ್ ಕುಮಾರ್ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಹಿಳೆಯರ ಬಗ್ಗೆ ಇಷ್ಟೊಂದು ಲಘುವಾಗಿ ಮಾತನಾಡುವರು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಿ ರಾಜಕೀಯ ವಿಶ್ರಾಂತಿ ಪಡೆಯಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾವೇಣು ಮಾತನಾಡಿ ಇತ್ತೀಚೆಗೆ ರಮೇಶ್ ಕುಮಾರ್ ಸದನದಲ್ಲಿ ಮಾತನಾಡುವಾಗ ನೈತಿಕ ಮೌಲ್ಯಗಳನ್ನು ಕಳೆದುಕೊಂಡು ಮಾತನಾಡುತ್ತ ಮಹಿಳೆಯರನ್ನು ಅಪಮಾನ ಮಾಡಿರುವುದು ಮಹಿಳಾಲೋಕ ಕಳಂಕ ಎದುರಿಸುವಂತಾಗಿದೆ.
ಮಹಿಳೆಯರ ಬಗ್ಗೆ ಅಗೌರವವಾಗಿ ನಡೆದುಕೊಳ್ಳುವವರಿಗೆ ಕಾನೂನು ಆ ಪದದ ಬಗ್ಗೆ ಮಾತನಾಡುವವರ ಮೇಲೂ ಅನ್ವಯಿಸುವಂತೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಾಗಬೇಕು ಎಂದು ಒತ್ತಾಯಿಸಿದರು.ರ್ಯಾಲಿಯಲ್ಲಿ ಜಿಲ್ಲಾ ವಕ್ತಾರ ಮುನಿವೆಂಕಟಪ್ಪ, ತಾಲ್ಲೂಕು ಅಧ್ಯಕ್ಷ ಅಶೋಕ್ ರೆಡ್ಡಿ, ಕಾರ್ಯದರ್ಶಿ ಶಿವಶಂಕರಗೌಡ ಪುರಸಭೆ ಸದಸ್ಯ ರಾಮಾಂಜಿ,ರಮೇಶ್,ಶಫಿ ಮಹಿಳಾ ಮೋರ್ಚಾ ಮುಖಂಡರು ಇದ್ದರು.
Breaking News
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
Monday, April 7