ನ್ಯೂಜ್ ಡೆಸ್ಕ್:ಸಂವೇದನಾಶೀಲ ಚಿಂತಕ ಹಾಗು ಹಿರಿಯ ಪತ್ರಕರ್ತ ಡಿ ಉಮಾಪತಿ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ನೀಡುವ ‘ಡಾ. ಬಿ.ಆರ್ ಅಂಬೇಡ್ಕರ್ ದತ್ತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ವ್ಯವಸ್ಥೆಯಲ್ಲಿ ಸಾಮಾಜಿಕ,ರಾಜಕೀಯ ಮತ್ತು ಸಾಂಸ್ಕೃತಿಕ ವಲಯಗಳು ಅದೆಷ್ಟೇ ಕಲುಷಿತಗೊಂಡಿದ್ದು ಅವುಗಳ ನಡುವೆಯೇ ಇದ್ದು ಅವುಗಳನ್ನು ಮಾನವೀಯಗೊಳಿಸುವ,ನ್ಯಾಯಬದ್ಧಗೊಳಿಸುವ ಹಾಗೂ ಆ ದಿಕ್ಕಿನಲ್ಲಿ ಜನಸಮುದಾಯಗಳನ್ನು ವೈಚಾರಿಕವಾಗಿ ಜಾಗೃತ ಗೊಳಿಸುವತ್ತ ಚಳವಳಿ ಮಾದರಿಯಲ್ಲಿ ಬರೆಯುವುದು, ಬದುಕುವುದು ನೈಜ ಪತ್ರಕರ್ತನ ಗುಣಲಕ್ಷಣಗಳಾಗುತ್ತವೆ” ಎಂದು ಪತ್ರಕರ್ತರ ಸಂಘ ಹೇಳಿದೆ.
ಪ್ರಶಸ್ತಿ ಮತ್ತು ಫಲಕ ಒಳಗೊಂಡಿರುವ ಪ್ರಶಸ್ತಿಯನ್ನು ಬಾಗಲಕೋಟೆ ಪತ್ರಕರ್ತ ಸುಭಾಷ್ ಹೊದ್ಲೂರು ಅವರು ಅಂಬೇಡ್ಕರ್ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಗೆ ದತ್ತಿನಿಧಿ ಸ್ಥಾಪಿಸಿದ್ದು 2021-22 ಸಾಲಿನಿಂದ ನೀಡಲಾಗುತ್ತಿದೆ ಎಂದು ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದತಗಡೂರು ತಿಳಿಸಿದ್ದಾರೆ.
“ಭಾರತದ ಪತ್ರಿಕೋದ್ಯಮಕ್ಕೆ ಮತ್ತು ಪತ್ರಕರ್ತನಿಗೆ ಮೌಲಿಕ ಮಾದರಿಯೊಂದನ್ನು ಕಟ್ಟಿಕೊಟ್ಟ ಶ್ರೇಷ್ಠ ಪತ್ರಕರ್ತ ಬಾಬಾಸಾಹೇಬ್ ಅಂಬೇಡ್ಕರ್. ಅವರ ಹೆಸರಿನಲ್ಲಿ ಸಾಮಾಜಿಕ ಕಳಕಳಿ, ಮಾನವೀಯ ವರದಿ ಮತ್ತು ವಿಶ್ಲೇಷಣಾ ಬರಹಗಳೊಂದಿಗೆ ಪತ್ರಿಕೋದ್ಯಮದಲ್ಲಿ ಛಾಪು ಮೂಡಿಸಿರುವವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿಯ ಪ್ರಶಸ್ತಿಯನ್ನು ಡಿ.ಉಮಾಪತಿ ಅವರಿಗೆ ನೀಡುವ ಮೂಲಕ ಗೌರವಿಸಲಾಗುತ್ತಿದೆ”ಎಂದು ತಿಳಿಸಿದೆ.
ಕಳೆಬಾರಿ ‘ಬಾಬಾಸಾಹೇಬ್ ಅಂಬೇಡ್ಕರ್ ದತ್ತಿ ಪ್ರಶಸ್ತಿ’ಯನ್ನು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರಿಗೆ ನೀಡಲಾಗಿತ್ತು. ಈ ಬಾರಿ ಡಿ.ಉಮಾಪತಿ ಅವರಿಗೆ ನೀಡಲಾಗುತ್ತಿದೆ.
ಅಂಬೇಡ್ಕರ್ ಅವರ ಬದುಕು ಮತ್ತು ಆಶಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು,ರಾಜ್ಯ ಮತ್ತು ರಾಷ್ಟ್ರ ರಾಜಕಾರಣ, ಸಾಮಾಜಿಕ ವ್ಯವಸ್ಥೆಯೊಳಗಿನ ಅನಿಷ್ಟಗಳ ಕುರಿತು ರಾಜಿಯಿಲ್ಲದೆ ವರದಿ ಮಾಡುವ ಮೂಲಕ ಸತ್ಯ-ನ್ಯಾಯ-ಪ್ರೀತಿಯ ಧ್ಯೇಯಗಳೊಂದಿಗೆ ಪತ್ರಿಕೋದ್ಯಮದಲ್ಲಿ ಪ್ರಾಮಾಣಿಕವಾಗಿ ಆಡಂಬರ ವಿಲ್ಲದೆ ಸೇವೆ ಸಲ್ಲಿಸುತ್ತಿರುವ ಡಿ.ಉಮಾಪತಿ ಅವರ ಆಯ್ಕೆ ಮೌಲ್ಯಗಳನ್ನು ಹೆಚ್ಚಿಸಿದೆ ವೈಚಾರಿಕತೆಯ ಚಿಂತನಾ ಪತ್ರಕರ್ತ ಡಿ.ಉಮಾಪತಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂಬೇಡ್ಕರ್ ಹೆಸರಿನ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದ್ದು ಕಲುಷಿತ ವ್ಯವಸ್ಥೆಯಲ್ಲಿ ಮಾಣಿಕ್ಯದಂತೆ ಹೊಳೆಯುವ ಅವರ ಕಾರ್ಯವೈಖರಿ ಸಮಾಜಕ್ಕೆ ಹಾಗು ಯುವ ಪೀಳಿಗೆಯ ಪತ್ರಕರ್ತರಿಗೆ ಮಾದರಿಯಾಗಿದೆ ಡಿ.ಉಮಾಪತಿ ಅವರನ್ನು vcs media network ಅಭಿಮಾನದ ಅಭಿನಂದನೆ ಸಲ್ಲಿಸುತ್ತದೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8