ಶ್ರೀನಿವಾಸಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರಲ್ಲಿ ಇಬ್ಬರು ಸಾವನಪ್ಪಿ ಒರ್ವ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶ್ರೀನಿವಾಸಪುರ-ಕೋಲಾರ ರಸ್ತೆಯ ಶ್ರೀನಿವಾಸಪುರ ತಾಲ್ಲೂಕಿನ ಹೂವಳ್ಳಿ ಗೇಟ್ ನ ಬಳಿ ಶನಿವಾರ ತಡಸಂಜೆ ನಡೆದಿರುತ್ತದೆ.
ಹೂವಳ್ಳಿ ಗ್ರಾಮದ ಮೂವರು ಒಂದೇ ದ್ವೀಚಕ್ರ ವಾಹದಲ್ಲಿ ಜೊನ್ನಪಲ್ಲಿ ಗ್ರಾಮದಲ್ಲಿನ ತಿಥಿ ಕಾರ್ಯಕ್ಕೆ ಹೋಗುತ್ತಿರುವಾಗ ಅಪಘಾತ ನಡೆದಿದ್ದು ಅಪಘಾತದಲ್ಲಿ ಹೂವಳ್ಳಿ ಗ್ರಾಮದ ರತ್ನಮ್ಮ (42) ಮತ್ತು ಆಕೆಯ ಮೈದುನ ವೆಂಕಟರವಣ (47) ಸ್ಥಳದಲ್ಲಿಯೇ ಮೃತಪಟ್ಟಿದ್ದು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ರತ್ನಮ್ಮನ ಮಗ ಸುರೇಶ್ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ.ಸ್ಥಳೀಯರ ಸಹಾಯದಿಂದ ಗಾಯಾಳು ಸುರೇಶ್ ನನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಠಾಣಾಧಿಕಾರಿ ನಾರಯಣಸ್ವಾಮಿ ಭೇಟಿ ನೀಡಿ ಪರಶೀಲಿಸಿರುತ್ತಾರೆ.
Breaking News
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
Monday, April 7